‘ಪಕ್ಷ ಅಧಿಕಾರಕ್ಕೆ ಬರುವ ಮೊದಲೇ ಮುಂದಿನ ಮುಖ್ಯಮಂತ್ರಿ ಬಗ್ಗೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬೆಂಬಲಿಗರು ನೀಡುತ್ತಿರುವ ಸಾರ್ವಜನಿಕ ಹೇಳಿಕೆಗಳಿಂದ ಪಕ್ಷಕ್ಕೆ ಹಾನಿ ಆಗಲಿದೆ. ಹಲವು ನಾಯಕರು, ಶಾಸಕರು, ಅದರಲ್ಲೂ ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದವರು ಎರಡೂ ಗುಂಪಿನ ಜೊತೆ ಗುರುತಿಸಿಕೊಂಡಿಲ್ಲ. ನಾಯಕತ್ವ ವಿಚಾರದಲ್ಲಿ ಇತ್ತೀಚಿನ ಹೇಳಿಕೆಗಳನ್ನು ಅವರು ಗಂಭೀರವಾಗಿಪರಿಗಣಿಸಿದ್ದಾರೆ’ ಎಂದೂ ಮೂಲಗಳು ಹೇಳಿವೆ.