<p><strong>ತುಮಕೂರು</strong>: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಈ ಬಗ್ಗೆ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್ಗೌಡ ಸೋಮವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ಸ್ವಾತಂತ್ರ್ಯ ದಿನೋತ್ಸವಕ್ಕೂ ಮೊದಲೇ ಮುಖ್ಯಮಂತ್ರಿ ಬದಲಾವಣೆ ಆಗಬಹುದು. ಈ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆದಿವೆ. ಬೊಮ್ಮಾಯಿ ಅವರು ತಮ್ಮ ಒಂದು ವರ್ಷದ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದರೂ ವರಿಷ್ಠರು ಬದಲಾವಣೆ ಮಾಡಬಹುದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’ ಎಂದರು.</p>.<p>‘ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಎಂಟತ್ತು ತಿಂಗಳು ಇದ್ದ ಸಮಯದಲ್ಲೂ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ರಾಜ್ಯದಲ್ಲೂ ಚುನಾವಣೆಗೆ ಮುನ್ನ ಬದಲಾವಣೆ ಮಾಡಲು ವರಿಷ್ಠರು ಮುಂದಾಗಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ವಿಚಾರ ನನಗೆ ಗೊತ್ತಿಲ್ಲ. ಅವರು ಹೇಳಿಲ್ಲ. ಶೋಭಾ ಮುಖ್ಯಮಂತ್ರಿಯಾದರೆ ಸಂತೋಷ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಈ ಬಗ್ಗೆ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್ಗೌಡ ಸೋಮವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ಸ್ವಾತಂತ್ರ್ಯ ದಿನೋತ್ಸವಕ್ಕೂ ಮೊದಲೇ ಮುಖ್ಯಮಂತ್ರಿ ಬದಲಾವಣೆ ಆಗಬಹುದು. ಈ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆದಿವೆ. ಬೊಮ್ಮಾಯಿ ಅವರು ತಮ್ಮ ಒಂದು ವರ್ಷದ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದರೂ ವರಿಷ್ಠರು ಬದಲಾವಣೆ ಮಾಡಬಹುದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’ ಎಂದರು.</p>.<p>‘ಕೆಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಎಂಟತ್ತು ತಿಂಗಳು ಇದ್ದ ಸಮಯದಲ್ಲೂ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ರಾಜ್ಯದಲ್ಲೂ ಚುನಾವಣೆಗೆ ಮುನ್ನ ಬದಲಾವಣೆ ಮಾಡಲು ವರಿಷ್ಠರು ಮುಂದಾಗಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ವಿಚಾರ ನನಗೆ ಗೊತ್ತಿಲ್ಲ. ಅವರು ಹೇಳಿಲ್ಲ. ಶೋಭಾ ಮುಖ್ಯಮಂತ್ರಿಯಾದರೆ ಸಂತೋಷ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>