ವಿಧಾನಪರಿಷತ್ ಉಪಸಭಾಪತಿ ಶ್ರೀ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಇದನ್ನು ನಂಬಲಿಕ್ಕೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆೆ.