ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಶ್ರೀಗಳುಯುಗಪುರುಷ ಬಸವಣ್ಣ ಅವರ ಕಾಯಕ ಮತ್ತು ದಾಸೋಹ ತತ್ವದಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಅನ್ನ ಅರಿವು ದಾಸೋಹದ ಜತೆಗೆ ಶಿಕ್ಷಣ ಅಧ್ಯಾತ್ಮದಲ್ಲೂ ಬದುಕು ಸವೆಸಿದರು. ಎಲ್ಲ ಜಾತಿ ಧರ್ಮಗಳ ಜನರಿಗೂ ಶಿಕ್ಷಣ ಆಶ್ರಯ ನೀಡಿದರು. ಇಲ್ಲಿ ಕಲಿತವರು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನ ಪಡೆದಿದ್ದಾರೆ ಎಂದು ಪ್ರಶಂಸಿಸಿದರು.