<p><strong>ಬೆಂಗಳೂರು: </strong>ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ತುಂಬಿದ್ದರಿಂದ ಇದೇ 25 ರಂದು ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಏರ್ಪಡಿಸಿದ್ದ ಭೋಜನ ಕೂಟವನ್ನು ರದ್ದುಪಡಿಸಲಾಗಿದೆ.</p>.<p>ಮಂಗಳವಾರ ರಾತ್ರಿ ಎಲ್ಲ ಶಾಸಕರಿಗೂ ವಾಟ್ಸ್ಆ್ಯಪ್ ಸಂದೇಶದ ಮೂಲಕ ಆಹ್ವಾನ ಕಳುಹಿಸಲಾಗಿತ್ತು. ಆದರೆ, ಬುಧವಾರ ಬೆಳಿಗ್ಗೆ ಸ್ವತಃ ಮುಖ್ಯಮಂತ್ರಿಯವರಿಂದಲೇ ಸೂಚನೆ ಬಂದ ಕಾರಣ ಭೋಜನ ಕೂಟ ರದ್ದುಪಡಿಸಲಾಯಿತು ಎಂದು ಮೂಲಗಳು ಹೇಳಿವೆ.</p>.<p>ದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿ ಬಂದ ಯಡಿಯೂರಪ್ಪ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ ಎಂದು ಮಾಧ್ಯಮಕ್ಕೆ ಹೇಳಿದ್ದರು. ಅದೇ ದಿನ ರಾತ್ರಿ ಅದು ಶಾಸಕಾಂಗ ಪಕ್ಷದ ಸಭೆಯಲ್ಲ, ಶಾಸಕರಿಗೆ ಔತಣ ಕೂಟ ನೀಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿತ್ತು.</p>.<p>ಔತಣ ಕೂಟಕ್ಕೆ ಶಾಸಕರನ್ನು ಆಹ್ವಾನಿಸುವಂತೆ ಮುಖ್ಯ ಸಚೇತಕ ವಿ.ಸುನಿಲ್ ಕುಮಾರ್ ಅವರಿಗೆ ಯಡಿಯೂರಪ್ಪ ಮಂಗಳವಾರ ಸೂಚಿಸಿದ್ದರು. ಎರಡೆರಡು ಬಾರಿ ಖಚಿತ ಪಡಿಸಿಕೊಂಡ ಬಳಿಕವೇ ಸುನಿಲ್ ಕುಮಾರ್ ಆಹ್ವಾನವನ್ನು ಕಳುಹಿಸಿದರು. ಆದರೆ, ಬುಧವಾರ ರದ್ದುಪಡಿಸುವಂತೆ ಸೂಚನೆ ಬಂದಿತು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ತುಂಬಿದ್ದರಿಂದ ಇದೇ 25 ರಂದು ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಏರ್ಪಡಿಸಿದ್ದ ಭೋಜನ ಕೂಟವನ್ನು ರದ್ದುಪಡಿಸಲಾಗಿದೆ.</p>.<p>ಮಂಗಳವಾರ ರಾತ್ರಿ ಎಲ್ಲ ಶಾಸಕರಿಗೂ ವಾಟ್ಸ್ಆ್ಯಪ್ ಸಂದೇಶದ ಮೂಲಕ ಆಹ್ವಾನ ಕಳುಹಿಸಲಾಗಿತ್ತು. ಆದರೆ, ಬುಧವಾರ ಬೆಳಿಗ್ಗೆ ಸ್ವತಃ ಮುಖ್ಯಮಂತ್ರಿಯವರಿಂದಲೇ ಸೂಚನೆ ಬಂದ ಕಾರಣ ಭೋಜನ ಕೂಟ ರದ್ದುಪಡಿಸಲಾಯಿತು ಎಂದು ಮೂಲಗಳು ಹೇಳಿವೆ.</p>.<p>ದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿ ಮಾಡಿ ಬಂದ ಯಡಿಯೂರಪ್ಪ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ ಎಂದು ಮಾಧ್ಯಮಕ್ಕೆ ಹೇಳಿದ್ದರು. ಅದೇ ದಿನ ರಾತ್ರಿ ಅದು ಶಾಸಕಾಂಗ ಪಕ್ಷದ ಸಭೆಯಲ್ಲ, ಶಾಸಕರಿಗೆ ಔತಣ ಕೂಟ ನೀಡಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿತ್ತು.</p>.<p>ಔತಣ ಕೂಟಕ್ಕೆ ಶಾಸಕರನ್ನು ಆಹ್ವಾನಿಸುವಂತೆ ಮುಖ್ಯ ಸಚೇತಕ ವಿ.ಸುನಿಲ್ ಕುಮಾರ್ ಅವರಿಗೆ ಯಡಿಯೂರಪ್ಪ ಮಂಗಳವಾರ ಸೂಚಿಸಿದ್ದರು. ಎರಡೆರಡು ಬಾರಿ ಖಚಿತ ಪಡಿಸಿಕೊಂಡ ಬಳಿಕವೇ ಸುನಿಲ್ ಕುಮಾರ್ ಆಹ್ವಾನವನ್ನು ಕಳುಹಿಸಿದರು. ಆದರೆ, ಬುಧವಾರ ರದ್ದುಪಡಿಸುವಂತೆ ಸೂಚನೆ ಬಂದಿತು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>