ಬೊಮ್ಮಾಯಿ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದಾರೆ. ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವುದು, ನಿಗಮ, ಮಂಡಳಿಗಳ ನೇಮಕಾತಿ ಸೇರಿದಂತೆ ಹಲವು ವಿಷಯಗಳ ಕುರಿತು ಪಕ್ಷದ ವರಿಷ್ಠರ ಜತೆಗೆ ಮಾತುಕತೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಅದಕ್ಕೆ ಪೂರಕವಾಗಿ ಯಡಿಯೂರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.