‘ಬ್ರಮರವಾಸಿನಿ ಕಲ್ಲು ಕ್ವಾರಿಯಲ್ಲಿ ಸ್ಫೋಟಕ್ಕೆ ಅನುಮತಿ ನೀಡಿಲ್ಲ. ಆದರೆ, ಅಕ್ರಮವಾಗಿ ಸ್ಫೋಟ ಮಾಡಿದ್ದಾರೆ. ಈ ಹಿಂದೆ ಕ್ವಾರಿ ಹಾಗೂ ಕ್ರಷರ್ ಮೇಲೆ ದಾಳಿ ಮಾಡಲಾಗಿತ್ತು. ದಾಳಿ ವೇಳೆ ಬಳಸಿದ್ದ ಕಂಪ್ರೇಸರ್ ಜಪ್ತಿ ಮಾಡಲಾಗಿತ್ತು. ಪೊಲೀಸರ ಕಣ್ಣು ತಪ್ಪಿಸಲು ಜಿಲೇಟಿನ್ ಕಡ್ಡಿಗಳನ್ನು ಬಚ್ಚಿಟ್ಟಿದ್ದರು. ಬಚ್ಚಿಟ್ಟಿದ್ದ ಕಡ್ಡಿಗಳನ್ನು ತೆಗೆದುಕೊಂಡು ಹೋಗಲು ಬಂದಾಗ ಘಟನೆ ನಡೆದಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಮಾಹಿತಿ ನೀಡಿದರು.