<p><strong>ಚಿಂತಾಮಣಿ (ಚಿಕ್ಕಬಳ್ಳಾಪುರ): </strong>ಚಿಂತಾಮಣಿ–ಮದನಪಲ್ಲಿ ರಸ್ತೆಯ ಮರಿನಾಯಕನಹಳ್ಳಿ ಬಳಿ ಭಾನುವಾರ ಸಿಮೆಂಟ್ ಲಾರಿ ಮತ್ತು ಜೀಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ.</p>.<div class="field-items"><p>ಆರು ಜನ ಅಪಘಾತದ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ 17 ಮಂದಿ ಗಾಯಗೊಂಡಿದ್ದು, ಕೋಲಾರ ಮತ್ತು ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.</p><div class="field-item even"><p>ಚಿಂತಾಮಣಿ ತಾಲ್ಲೂಕಿನ ನಾರಾಯಣಸ್ವಾಮಿ, ಮುನಿರತ್ನಮ್ಮ, ವೆಂಕಟಲಕ್ಷ್ಮಮ್ಮ, ಮುನಿಕೃಷ್ಣ, ನಿಖಿಲ್,ಜೀಪ್ ಚಾಲಕ ಮತ್ತು ಮಾಲೀಕ ರಮೇಶ್, ಬೆಂಗಳೂರು ನಿವಾಸಿಗಳಾದ ರಾಜಪ್ಪ ಮತ್ತು ಮೋನಿಕಾ ದಂಪತಿ ಮೃತಪಟ್ಟವರು.</p><p>ಸಿಮೆಂಟ್ ಲಾರಿ ಚಿಂತಾಮಣಿಯಿಂದ ಮದನಪಲ್ಲಿ ಕಡೆಗೆ ಸಾಗುತ್ತಿತ್ತು. ಪ್ರಯಾಣಿಕರನ್ನು ತುಂಬಿಕೊಂಡಿದ್ದ ಜೀಪ್ ತಾಡಿಗೋಳ್ ಕ್ರಾಸ್ನಿಂದ ಚಿಂತಾಮಣಿಗೆ ಸಾಗುತ್ತಿತ್ತು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದೆ.</p><p>ಜೀಪ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಜೀಪ್ನಲ್ಲಿ ಅಂದಾಜು 25 ಪ್ರಯಾಣಿಕರಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಅಪಘಾತದ ರಭಸಕ್ಕೆ ಶವಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಪಘಾತದ ನಂತರ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಆಂಧ್ರದ ಗಡಿಭಾಗವಾದ ತಾಡಿಗೋಳ್ ಕ್ರಾಸ್, ಗೌನಿಪಲ್ಲಿ, ಶ್ರೀನಿವಾಸಪುರ ಭಾಗದಲ್ಲಿಜೀಪ್ಗಳಲ್ಲಿ ಪ್ರಯಾಣಿಕರನ್ನು ಕುರಿಗಳಂತೆ ತುಂಬಲಾಗುತ್ತದೆ. ಇದೇ ಇಷ್ಟೊಂದು ಸಾವು ನೋವಿಗೆ ಕಾರಣವಾಗಿದೆ. ಪೊಲೀಸರು ಮತ್ತು ಆರ್ಟಿಒ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಸ್ಥಳೀಯರು ಅಪಘಾತದ ಸ್ಥಳದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.</p><p>ಶಾಸಕರಾದ ಎಂ.ಕೃಷ್ಣಾರೆಡ್ಡಿ, ಕೆ.ಆರ್.ರಮೇಶ್ ಕುಮಾರ್, ಕೆ.ವೈ.ನಂಜೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದರು.</p></div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ (ಚಿಕ್ಕಬಳ್ಳಾಪುರ): </strong>ಚಿಂತಾಮಣಿ–ಮದನಪಲ್ಲಿ ರಸ್ತೆಯ ಮರಿನಾಯಕನಹಳ್ಳಿ ಬಳಿ ಭಾನುವಾರ ಸಿಮೆಂಟ್ ಲಾರಿ ಮತ್ತು ಜೀಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ.</p>.<div class="field-items"><p>ಆರು ಜನ ಅಪಘಾತದ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ 17 ಮಂದಿ ಗಾಯಗೊಂಡಿದ್ದು, ಕೋಲಾರ ಮತ್ತು ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.</p><div class="field-item even"><p>ಚಿಂತಾಮಣಿ ತಾಲ್ಲೂಕಿನ ನಾರಾಯಣಸ್ವಾಮಿ, ಮುನಿರತ್ನಮ್ಮ, ವೆಂಕಟಲಕ್ಷ್ಮಮ್ಮ, ಮುನಿಕೃಷ್ಣ, ನಿಖಿಲ್,ಜೀಪ್ ಚಾಲಕ ಮತ್ತು ಮಾಲೀಕ ರಮೇಶ್, ಬೆಂಗಳೂರು ನಿವಾಸಿಗಳಾದ ರಾಜಪ್ಪ ಮತ್ತು ಮೋನಿಕಾ ದಂಪತಿ ಮೃತಪಟ್ಟವರು.</p><p>ಸಿಮೆಂಟ್ ಲಾರಿ ಚಿಂತಾಮಣಿಯಿಂದ ಮದನಪಲ್ಲಿ ಕಡೆಗೆ ಸಾಗುತ್ತಿತ್ತು. ಪ್ರಯಾಣಿಕರನ್ನು ತುಂಬಿಕೊಂಡಿದ್ದ ಜೀಪ್ ತಾಡಿಗೋಳ್ ಕ್ರಾಸ್ನಿಂದ ಚಿಂತಾಮಣಿಗೆ ಸಾಗುತ್ತಿತ್ತು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದೆ.</p><p>ಜೀಪ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಜೀಪ್ನಲ್ಲಿ ಅಂದಾಜು 25 ಪ್ರಯಾಣಿಕರಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಅಪಘಾತದ ರಭಸಕ್ಕೆ ಶವಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಪಘಾತದ ನಂತರ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಆಂಧ್ರದ ಗಡಿಭಾಗವಾದ ತಾಡಿಗೋಳ್ ಕ್ರಾಸ್, ಗೌನಿಪಲ್ಲಿ, ಶ್ರೀನಿವಾಸಪುರ ಭಾಗದಲ್ಲಿಜೀಪ್ಗಳಲ್ಲಿ ಪ್ರಯಾಣಿಕರನ್ನು ಕುರಿಗಳಂತೆ ತುಂಬಲಾಗುತ್ತದೆ. ಇದೇ ಇಷ್ಟೊಂದು ಸಾವು ನೋವಿಗೆ ಕಾರಣವಾಗಿದೆ. ಪೊಲೀಸರು ಮತ್ತು ಆರ್ಟಿಒ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಸ್ಥಳೀಯರು ಅಪಘಾತದ ಸ್ಥಳದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.</p><p>ಶಾಸಕರಾದ ಎಂ.ಕೃಷ್ಣಾರೆಡ್ಡಿ, ಕೆ.ಆರ್.ರಮೇಶ್ ಕುಮಾರ್, ಕೆ.ವೈ.ನಂಜೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದರು.</p></div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>