<p><strong>ಬೆಂಗಳೂರು</strong>: ‘ದೇಶದ್ರೋಹ ಆರೋಪದ ಹಿನ್ನೆಲೆಯಲ್ಲಿ ಬೀದರ್ನ ಶಾಹಿನ್ ಶಿಕ್ಷಣ ಸಂಸ್ಥೆಯ ಮಕ್ಕಳನ್ನು ಸಮವಸ್ತ್ರ, ಮತ್ತು ಶಸ್ತ್ರಾಸ್ತ್ರದೊಂದಿಗೆ ವಿಚಾರಣೆ ನಡೆಸಿದ ಐವರು ಪೊಲೀಸ್ ಸಿಬ್ಬಂದಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>ಈ ಸಂಬಂಧ ವಕೀಲೆ ನಯನ ಜ್ಯೋತಿ ಝಾವರ್ ಹಾಗೂ ಮಾನವ ಹಕ್ಕುಗಳ ಸಂಘಟನೆ ‘ಸಿಕ್ರಮ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ಸರ್ಕಾರದ ಪರ ವಕೀಲರು ಜ್ಞಾಪನಾ ಪತ್ರ ಸಲ್ಲಿಸಿ, ‘ಮಕ್ಕಳನ್ನು ವಿಚಾರಣೆಗೆ ಒಳಪಡಿಸುವಾಗ ಬಾಲ ನ್ಯಾಯ ಕಾಯ್ದೆಯ ಸಂಬಂಧಪಟ್ಟ ಕಲಂಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿ ಈಗಾಗಲೇ ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>‘ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಐವರು ಪೊಲೀಸರಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ. ಅವರಿಂದ ಉತ್ತರ ಬರಬೇಕಾಗಿದೆ. ನಂತರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ವಿವರಿಸಿದರು.</p>.<p>ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಪೀಠ,‘ಕೇವಲ ಷೋಕಾಸ್ ನೋಟಿಸ್ ನೀಡಿದರೆ ಸಾಕಾಗುವುದಿಲ್ಲ. ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದು ಮುಖ್ಯ’ ಎಂದ ನ್ಯಾಯಪೀಠ ವಿಚಾರಣೆಯನ್ನು 2022ರ ಮಾರ್ಚ್ಗೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದೇಶದ್ರೋಹ ಆರೋಪದ ಹಿನ್ನೆಲೆಯಲ್ಲಿ ಬೀದರ್ನ ಶಾಹಿನ್ ಶಿಕ್ಷಣ ಸಂಸ್ಥೆಯ ಮಕ್ಕಳನ್ನು ಸಮವಸ್ತ್ರ, ಮತ್ತು ಶಸ್ತ್ರಾಸ್ತ್ರದೊಂದಿಗೆ ವಿಚಾರಣೆ ನಡೆಸಿದ ಐವರು ಪೊಲೀಸ್ ಸಿಬ್ಬಂದಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>ಈ ಸಂಬಂಧ ವಕೀಲೆ ನಯನ ಜ್ಯೋತಿ ಝಾವರ್ ಹಾಗೂ ಮಾನವ ಹಕ್ಕುಗಳ ಸಂಘಟನೆ ‘ಸಿಕ್ರಮ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ಸರ್ಕಾರದ ಪರ ವಕೀಲರು ಜ್ಞಾಪನಾ ಪತ್ರ ಸಲ್ಲಿಸಿ, ‘ಮಕ್ಕಳನ್ನು ವಿಚಾರಣೆಗೆ ಒಳಪಡಿಸುವಾಗ ಬಾಲ ನ್ಯಾಯ ಕಾಯ್ದೆಯ ಸಂಬಂಧಪಟ್ಟ ಕಲಂಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿ ಈಗಾಗಲೇ ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>‘ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಐವರು ಪೊಲೀಸರಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ. ಅವರಿಂದ ಉತ್ತರ ಬರಬೇಕಾಗಿದೆ. ನಂತರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ವಿವರಿಸಿದರು.</p>.<p>ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ನ್ಯಾಯಪೀಠ,‘ಕೇವಲ ಷೋಕಾಸ್ ನೋಟಿಸ್ ನೀಡಿದರೆ ಸಾಕಾಗುವುದಿಲ್ಲ. ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದು ಮುಖ್ಯ’ ಎಂದ ನ್ಯಾಯಪೀಠ ವಿಚಾರಣೆಯನ್ನು 2022ರ ಮಾರ್ಚ್ಗೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>