ಶನಿವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನವರು ಎಲ್ಲದಕ್ಕೂ ಹೈಕೋರ್ಟ್ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕು ಎಂದು ಹೇಳುತ್ತಾರೆ. ಅವರು ಅಧಿಕಾರದಲ್ಲಿದ್ದಾಗ ಬಿಡಿಎ ಪ್ರಕರಣದ ತನಿಖೆಯನ್ನು ನ್ಯಾಯಾಧೀಶರಿಗೆ ವಹಿಸಲಾಗಿತ್ತು. ಅವರು ಹಗರಣದಿಂದ ಪಾರಾಗಲು ಆ ವಿಚಾರಣೆ ಅನುಕೂಲವಾಯಿತು ಅಷ್ಟೇ. ಪೊಲೀಸ್ ತನಿಖೆಯೇ ಬಹಳ ತ್ವರಿತಗತಿಯಲ್ಲಿ ನಡೆಯುತ್ತಿದೆ. ಚಿಲುಮೆ ಸಂಸ್ಥೆ ವಿರುದ್ಧ ಮೊನ್ನ ದೂರು ದಾಖಲಾಗಿದ್ದು, ನಿನ್ನೆ ಬಂಧನವಾಗಿದೆ’ ಎಂದು ಸಮರ್ಥಿಸಿಕೊಂಡರು.