ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಚುನಾವಣಾ ಪ್ರಕ್ರಿಯೆ ಮುಂದುವರಿಸುವ ನಿಟ್ಟಿನಲ್ಲಿ, ಆಯೋಗವು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಹುದ್ದೆಗೆ ಇಬ್ಬರು ವಿಶೇಷ ಅಧಿಕಾರಿಗಳನ್ನು
ನೇಮಕ ಮಾಡಬಹುದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ತನಿಖಾಧಿಕಾರಿ ಗುರುವಾರ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಗುರುವಾರ (ಡಿ.8) ಮಧ್ಯಾಹ್ನ ಚೇಂಬರ್ನಲ್ಲೇ ವಿಚಾರಣೆ ನಡೆಸಲಾಗುವುದು‘ ಎಂದು ವಿಚಾರಣೆ ಮುಂದೂಡಿತು.