‘ಅಂಬೇಡ್ಕರ್ ಮತ್ತು ಪ್ರಸ್ತುತತೆ’ ಕುರಿತು ಮಾತನಾಡಿದಕ್ರಿಯಾ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ನಾಗರಾಜ ಬಳ್ಳೇಕೆರೆ, ‘ಕೊಳೆಗೇರಿ ನಿವಾಸಿಗಳು, ಗ್ರಾಮೀಣ ಭಾಗದ ಬಡವರ ಬದುಕು ಈಗಲೂ ಶೋಚನೀಯವಾಗಿದೆ.ತಳ ಸಮುದಾಯದಲ್ಲೇ ಬಲಿಷ್ಠರಾಗಿರುವ ಕೆಲವರಷ್ಟೇ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳುತ್ತಿದ್ದಾರೆ. ದಲಿತರು ವಾಸಿಸುವ ಮನೆ ಹಾಗೂ ಉಡುಗೆ ತೊಡುಗೆಯಲ್ಲಷ್ಟೇ ಬದಲಾವಣೆಯಾಗಿದೆ. ಅವರ ಆರ್ಥಿಕ ಸ್ಥಿತಿ ಇಂದಿಗೂ ದಯನೀಯವಾಗಿದೆ’ ಎಂದರು.