ಚಿತ್ಪಾವನ ಸಮಾಜ ನಗರದಲ್ಲಿ ಶನಿವಾರ ಹಮ್ಮಿಕೊಂಡ ಸಮಾಜದ ‘ಸುವರ್ಣ ಸಂಭ್ರಮ’ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದರು. ‘ಬ್ರಾಹ್ಮಣ ಸಮುದಾಯದಲ್ಲಿ ಹಲವು ಉಪಜಾತಿಗಳಿದ್ದು, ಅವುಗಳ ನಡುವೆ ಆಂತರಿಕ ಕಚ್ಚಾಟ ನಡೆಯುತ್ತಲೇ ಇರುತ್ತದೆ. ಬ್ರಾಹ್ಮಣ ಸಮಾಜದಲ್ಲಿರುವ ಮಠಗಳಲ್ಲಿ ಒಂದು ಮಠವನ್ನು ಕಂಡರೆ ಮತ್ತೊಂದು ಮಠಕ್ಕೆ ಆಗದಿರುವುದು ವಿಪರ್ಯಾಸ. ರಾಜ್ಯದಲ್ಲಿ 42.5 ಲಕ್ಷ ಮಂದಿ ಬ್ರಾಹ್ಮಣರಿದ್ದಾರೆ. 21 ವಿಧಾನಸಭೆ ಕ್ಷೇತ್ರಗಳ ಚುನಾವಣೆಯಲ್ಲಿ ಬ್ರಾಹ್ಮಣರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ನಮ್ಮೊಳಗಿನ ಕಚ್ಚಾಟದಿಂದ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’ ಎಂಬಂತಾಗಿದೆ ನಮ್ಮ ಸ್ಥಿತಿ’ ಎಂದು ಬೇಸರ ವ್ಯಕ್ತಪಡಿಸಿದರು.