‘ಬೆಳಿಗ್ಗೆ 4.30ರ ಸುಮಾರಿಗೆ ಚಿತ್ತೂರು ತಲುಪಿದ್ದ ಕಾರು, ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ತಿರುಪತಿಯತ್ತ ಹೊರಟಿತ್ತು. ಚಾಲಕ, ಅತಿ ವೇಗವಾಗಿ ಕಾರು ಚಲಾಯಿಸಿದ್ದರು. ನಿಯಂತ್ರಣ ತಪ್ಪಿದ ಕಾರು, ಹೆದ್ದಾರಿಯ ಕೆಳಸೇತುವೆಯ ತಡೆಗೋಡೆಗೆ ಗುದ್ದಿತ್ತು. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿತು. ಪಿಎಸ್ಐ, ಕಾನ್ಸ್ಟೆಬಲ್ ಹಾಗೂ ಚಾಲಕ ಸ್ಥಳದಲ್ಲೇ ಮೃತಪಟ್ಟರೆಂದು ಆಂಧ್ರಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.