<p><strong>ಬೆಂಗಳೂರು: </strong>ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವೀರಶೈವ–ಲಿಂಗಾಯತ ಮತ್ತು ಇತರ ಸಮುದಾಯ ಮಾತ್ರವಲ್ಲ ಕ್ರೈಸ್ತ ಪಾದ್ರಿಗಳು ಮತ್ತು ಅಖಿಲ ಭಾರತ ಕ್ರೈಸ್ತ ಮಹಾಸಭಾ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ಮುಂದಿನ ಅವಧಿಯವರೆಗೆ ಯಡಿಯೂರಪ್ಪ ಅವರನ್ನೇ ಮುಂದುವರಿಸಬೇಕು ಎಂದು ಮನವಿ ಪತ್ರವನ್ನು ಬಿಜೆಪಿ ವರಿಷ್ಠರಿಗೆ ಪತ್ರ ಕಳುಹಿಸುವುದಾಗಿ ಹೇಳಿದ್ದಾರೆ. ಕ್ರೈಸ್ತ ಮುಖಂಡರ ನಿಯೋಗವೊಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/i-will-obey-the-high-commond-order-says-bs-yediyurappa-850494.html" target="_blank">ಇದೇ 26ಕ್ಕೆ ವರಿಷ್ಠರು ನೀಡುವ ಸೂಚನೆ ಪಾಲಿಸಲು ಸಿದ್ಧ: ಬಿಎಸ್ವೈ</a></strong></p>.<p>ಯಡಿಯೂರಪ್ಪ ಅವರು ಯಾವುದೇ ಧರ್ಮ, ಜಾತಿಗಳೆಂಬ ತಾರತಮ್ಯ ಮಾಡದೇ ಎಲ್ಲರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅದರಲ್ಲೂ ಕ್ರೈಸ್ತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ರಾಜ್ಯದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕೊಡುಗೆ ದೊಡ್ಡದು ಎಂದು ಕ್ರೈಸ್ತ ಸಮುದಾಯದ ಮುಖಂಡರು ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/arun-singh-who-did-not-reaction-about-on-the-karnataka-political-developments-and-bs-yediyurappa-bjp-850499.html" target="_blank">ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡದ ಅರುಣ್ ಸಿಂಗ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವೀರಶೈವ–ಲಿಂಗಾಯತ ಮತ್ತು ಇತರ ಸಮುದಾಯ ಮಾತ್ರವಲ್ಲ ಕ್ರೈಸ್ತ ಪಾದ್ರಿಗಳು ಮತ್ತು ಅಖಿಲ ಭಾರತ ಕ್ರೈಸ್ತ ಮಹಾಸಭಾ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ಮುಂದಿನ ಅವಧಿಯವರೆಗೆ ಯಡಿಯೂರಪ್ಪ ಅವರನ್ನೇ ಮುಂದುವರಿಸಬೇಕು ಎಂದು ಮನವಿ ಪತ್ರವನ್ನು ಬಿಜೆಪಿ ವರಿಷ್ಠರಿಗೆ ಪತ್ರ ಕಳುಹಿಸುವುದಾಗಿ ಹೇಳಿದ್ದಾರೆ. ಕ್ರೈಸ್ತ ಮುಖಂಡರ ನಿಯೋಗವೊಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/i-will-obey-the-high-commond-order-says-bs-yediyurappa-850494.html" target="_blank">ಇದೇ 26ಕ್ಕೆ ವರಿಷ್ಠರು ನೀಡುವ ಸೂಚನೆ ಪಾಲಿಸಲು ಸಿದ್ಧ: ಬಿಎಸ್ವೈ</a></strong></p>.<p>ಯಡಿಯೂರಪ್ಪ ಅವರು ಯಾವುದೇ ಧರ್ಮ, ಜಾತಿಗಳೆಂಬ ತಾರತಮ್ಯ ಮಾಡದೇ ಎಲ್ಲರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅದರಲ್ಲೂ ಕ್ರೈಸ್ತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ರಾಜ್ಯದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕೊಡುಗೆ ದೊಡ್ಡದು ಎಂದು ಕ್ರೈಸ್ತ ಸಮುದಾಯದ ಮುಖಂಡರು ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/arun-singh-who-did-not-reaction-about-on-the-karnataka-political-developments-and-bs-yediyurappa-bjp-850499.html" target="_blank">ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡದ ಅರುಣ್ ಸಿಂಗ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>