<p><strong>ಮಾಲೂರು (ಕೋಲಾರ):</strong> ‘ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಗಂಡು ಮಗನಂತೆ ಧೈರ್ಯವಂತೆ. ಆತ್ಮಹತ್ಯೆ ಮಾಡಿಕೊಳ್ಳುವುದಿದ್ದರೆ ಮನೆಯಲ್ಲೆ ಮಾಡಿಕೊಳ್ಳುತ್ತಿದ್ದಳು. ಸ್ನೇಹಿತರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯವೇನಿತ್ತು’ ಎಂದು ಸಿಐಡಿ ಡಿವೈಎಸ್ಪಿ ಲಕ್ಷ್ಮಿ ಸಾವಿನ ಬಗ್ಗೆ ಅವರ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<p>ಲಕ್ಷ್ಮಿ ಹುಟ್ಟೂರಾದ ಮಾಲೂರು ತಾಲ್ಲೂಕಿನ ತುರುವಾಲಟ್ಟಿ ಗ್ರಾಮದಲ್ಲಿ ಕುಟುಂಬದ ಸದಸ್ಯರು ಆಡಿದ ಮಾತುಗಳಿವು.</p>.<p>ಲಕ್ಷ್ಮಿ ಅವರ ಸ್ವಗ್ರಾಮ ತುರುವಾಲಟ್ಟಿಯಲ್ಲಿ ಮೌನ ಮಡುಗಟ್ಟಿದೆ. ಮನೆಯಲ್ಲಿ ನೆರೆದಿರುವ ಸಂಬಂಧಿಕರು, ಆಪ್ತರು, ಕುಟುಂಬದ ಸ್ನೇಹಿತರು ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ.</p>.<p>‘ಆಕೆ ಆತ್ಮಹತ್ಯೆ ಮಾಡಿಕೊಳ್ಳುವುದಿದ್ದರೆ ಮನೆಯಲ್ಲೆ ಮಾಡಿಕೊಳ್ಳುತ್ತಿದ್ದಳು.ಆಕೆಗೆ ಯಾರೊ ಏನೋ ಮಾಡಿದ್ದಾರೆ’ ಎಂದು ಲಕ್ಷ್ಮಿ ಅವರ ದೊಡ್ಡಮ್ಮ ತುರುವಾಲಟ್ಟಿ ಗ್ರಾಮದ ನಾರಾಯಣಮ್ಮ ಹೇಳಿದರು.</p>.<p>‘ಆಕೆ ಸ್ನೇಹಿತರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದರ ಬಗ್ಗೆ ಅನುಮಾನವಿದೆ. ಪೊಲೀಸ್ ಕೆಲಸಕ್ಕೆ ಸೇರಿದ ಮೇಲೆ ಆಕೆಗೆ ಸ್ವಲ್ಪ ಕೋಪ ಜಾಸ್ತಿಯಾಗಿತ್ತು. ಆದರೆ, ಹೀಗೆ ಮಾಡಿಕೊಳ್ಳುವಂತ ಮಗಳಲ್ಲ’ ಎಂದು ಕಣ್ಣೀರು ಹಾಕಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/cid-dysp-lakshmi-committed-suicide-787978.html" target="_blank">ಸಿಐಡಿ ಡಿವೈಎಸ್ಪಿ ವಿ. ಲಕ್ಷ್ಮಿ ಆತ್ಮಹತ್ಯೆ</a></strong></p>.<p>‘ಭಾನುವಾರ ಊರಿಗೆ ಬರುವುದಾಗಿ ಹೇಳಿದ್ದಳು. ಆದ್ರೆ ಅಷ್ಟರಲ್ಲಿ ಹೀಗಾಗಿದೆ. ಮಕ್ಕಳು ಇಲ್ಲ ಎಂದು ಕೊರಗುವ ಮಗಳಲ್ಲ ಆಕೆ. ಇನ್ನೂ ಇಲಾಖೆಯ ಬಡ್ತಿ ವಿಚಾರ ಗೊತ್ತಿಲ್ಲ’ ಎಂದರು.</p>.<p>‘ನನಗೆ ಏನೂ ಗೊತ್ತಿಲ್ಲ. ನನ್ನ ತಮ್ಮ (ಲಕ್ಷ್ಮಿ ಅಪ್ಪ ವೆಂಕಟೇಶ್) ಫೋನ್ ಮಾಡಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರಾತ್ರಿ ತಿಳಿಸಿದ’ ಎಂದು ಲಕ್ಷ್ಮಿದೊಡ್ಡಪ್ಪ ನಾರಾಯಣಪ್ಪ ಮೌನಕ್ಕೆ ಜಾರಿದರು.</p>.<p>‘ಆಕೆ ಬೆಳೆದಿದ್ದು ಓದಿದ್ದು, ಬೆಂಗಳೂರು ಮತ್ತು ಚಿಕ್ಕಮಗಳೂರಲ್ಲಿ. ಸಮಯ ಸಿಕ್ಕಾಗ ಮನೆಗೆ ಊಟಕ್ಕೆ ಬರುತ್ತೇನೆ ಎಂದಿದ್ದಳು’ ಎಂದು ಕಣ್ಣೀರಾದರು.</p>.<p><strong>ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ</strong><br />ಡಿವೈಎಸ್ ಪಿ ಲಕ್ಷ್ಮಿ ಅವರ ಅಂತ್ಯಕ್ರಿಯೆ ಮಾಲೂರು ತಾಲ್ಲೂಕಿನ ಸ್ವಗ್ರಾಮ ತುರುವಾಲಟ್ಟಿಯಲ್ಲಿ ಗುರುವಾರ ರಾತ್ರಿ ಸರ್ಕಾರಿ ಗೌರವದೊಂದಿಗೆ ನಡೆಯಿತು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ಲಕ್ಷ್ಮಿ ಅವರ ತಂದೆ ವೆಂಕಟೇಶ್ ಅವರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು (ಕೋಲಾರ):</strong> ‘ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಗಂಡು ಮಗನಂತೆ ಧೈರ್ಯವಂತೆ. ಆತ್ಮಹತ್ಯೆ ಮಾಡಿಕೊಳ್ಳುವುದಿದ್ದರೆ ಮನೆಯಲ್ಲೆ ಮಾಡಿಕೊಳ್ಳುತ್ತಿದ್ದಳು. ಸ್ನೇಹಿತರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯವೇನಿತ್ತು’ ಎಂದು ಸಿಐಡಿ ಡಿವೈಎಸ್ಪಿ ಲಕ್ಷ್ಮಿ ಸಾವಿನ ಬಗ್ಗೆ ಅವರ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<p>ಲಕ್ಷ್ಮಿ ಹುಟ್ಟೂರಾದ ಮಾಲೂರು ತಾಲ್ಲೂಕಿನ ತುರುವಾಲಟ್ಟಿ ಗ್ರಾಮದಲ್ಲಿ ಕುಟುಂಬದ ಸದಸ್ಯರು ಆಡಿದ ಮಾತುಗಳಿವು.</p>.<p>ಲಕ್ಷ್ಮಿ ಅವರ ಸ್ವಗ್ರಾಮ ತುರುವಾಲಟ್ಟಿಯಲ್ಲಿ ಮೌನ ಮಡುಗಟ್ಟಿದೆ. ಮನೆಯಲ್ಲಿ ನೆರೆದಿರುವ ಸಂಬಂಧಿಕರು, ಆಪ್ತರು, ಕುಟುಂಬದ ಸ್ನೇಹಿತರು ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ.</p>.<p>‘ಆಕೆ ಆತ್ಮಹತ್ಯೆ ಮಾಡಿಕೊಳ್ಳುವುದಿದ್ದರೆ ಮನೆಯಲ್ಲೆ ಮಾಡಿಕೊಳ್ಳುತ್ತಿದ್ದಳು.ಆಕೆಗೆ ಯಾರೊ ಏನೋ ಮಾಡಿದ್ದಾರೆ’ ಎಂದು ಲಕ್ಷ್ಮಿ ಅವರ ದೊಡ್ಡಮ್ಮ ತುರುವಾಲಟ್ಟಿ ಗ್ರಾಮದ ನಾರಾಯಣಮ್ಮ ಹೇಳಿದರು.</p>.<p>‘ಆಕೆ ಸ್ನೇಹಿತರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದರ ಬಗ್ಗೆ ಅನುಮಾನವಿದೆ. ಪೊಲೀಸ್ ಕೆಲಸಕ್ಕೆ ಸೇರಿದ ಮೇಲೆ ಆಕೆಗೆ ಸ್ವಲ್ಪ ಕೋಪ ಜಾಸ್ತಿಯಾಗಿತ್ತು. ಆದರೆ, ಹೀಗೆ ಮಾಡಿಕೊಳ್ಳುವಂತ ಮಗಳಲ್ಲ’ ಎಂದು ಕಣ್ಣೀರು ಹಾಕಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/cid-dysp-lakshmi-committed-suicide-787978.html" target="_blank">ಸಿಐಡಿ ಡಿವೈಎಸ್ಪಿ ವಿ. ಲಕ್ಷ್ಮಿ ಆತ್ಮಹತ್ಯೆ</a></strong></p>.<p>‘ಭಾನುವಾರ ಊರಿಗೆ ಬರುವುದಾಗಿ ಹೇಳಿದ್ದಳು. ಆದ್ರೆ ಅಷ್ಟರಲ್ಲಿ ಹೀಗಾಗಿದೆ. ಮಕ್ಕಳು ಇಲ್ಲ ಎಂದು ಕೊರಗುವ ಮಗಳಲ್ಲ ಆಕೆ. ಇನ್ನೂ ಇಲಾಖೆಯ ಬಡ್ತಿ ವಿಚಾರ ಗೊತ್ತಿಲ್ಲ’ ಎಂದರು.</p>.<p>‘ನನಗೆ ಏನೂ ಗೊತ್ತಿಲ್ಲ. ನನ್ನ ತಮ್ಮ (ಲಕ್ಷ್ಮಿ ಅಪ್ಪ ವೆಂಕಟೇಶ್) ಫೋನ್ ಮಾಡಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ರಾತ್ರಿ ತಿಳಿಸಿದ’ ಎಂದು ಲಕ್ಷ್ಮಿದೊಡ್ಡಪ್ಪ ನಾರಾಯಣಪ್ಪ ಮೌನಕ್ಕೆ ಜಾರಿದರು.</p>.<p>‘ಆಕೆ ಬೆಳೆದಿದ್ದು ಓದಿದ್ದು, ಬೆಂಗಳೂರು ಮತ್ತು ಚಿಕ್ಕಮಗಳೂರಲ್ಲಿ. ಸಮಯ ಸಿಕ್ಕಾಗ ಮನೆಗೆ ಊಟಕ್ಕೆ ಬರುತ್ತೇನೆ ಎಂದಿದ್ದಳು’ ಎಂದು ಕಣ್ಣೀರಾದರು.</p>.<p><strong>ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ</strong><br />ಡಿವೈಎಸ್ ಪಿ ಲಕ್ಷ್ಮಿ ಅವರ ಅಂತ್ಯಕ್ರಿಯೆ ಮಾಲೂರು ತಾಲ್ಲೂಕಿನ ಸ್ವಗ್ರಾಮ ತುರುವಾಲಟ್ಟಿಯಲ್ಲಿ ಗುರುವಾರ ರಾತ್ರಿ ಸರ್ಕಾರಿ ಗೌರವದೊಂದಿಗೆ ನಡೆಯಿತು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಅವರು ಲಕ್ಷ್ಮಿ ಅವರ ತಂದೆ ವೆಂಕಟೇಶ್ ಅವರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>