ಕರ್ತವ್ಯದ ವೇಳೆ, ಕರ್ತವ್ಯದಿಂದ ಬಿಡುಗಡೆ ಹೊಂದಿದ ಸಂದರ್ಭದಲ್ಲಿ ಪೊಲೀಸರು ರಾತ್ರಿ ವೇಳೆ ಹೆಚ್ಚು ಸಂಚರಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಸಾವು–ನೋವುಗಳೂ ಘಟಿಸುಸುತ್ತಿವೆ. ಇದೇ ಕಾರಣಕ್ಕೆ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಗೊತ್ತಾಗಿದೆ. ಸೂಚನೆ ಆದೇಶವನ್ನು ಸಿಐಡಿಯ ಎಲ್ಲ ಡಿವೈಎಸ್ಪಿಗಳು, ಇನ್ಸ್ಪೆಕ್ಟರ್ಗಳಿಗೆ ಕಳುಹಿಸಲಾಗಿದೆ.