‘ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಡಿವೈಎಸ್ಪಿ ಆಗಿದ್ದ ಶಾಂತಕುಮಾರ್, ನಿಯೋಜನೆ ಮೇರೆಗೆ ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಪಿಎಸ್ಐ ನೇಮಕಾತಿ ಪ್ರಕ್ರಿಯೆ ಉಸ್ತುವಾರಿ ವಹಿಸಿಕೊಂಡಿದ್ದರು. ಅವರ ಮೂಲಕವೇ ಅಕ್ರಮ ನಡೆದಿರುವುದು ಪುರಾವೆಗಳಿಂದ ಗೊತ್ತಾಗಿದೆ. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳ ಕೈವಾಡವಿದ್ದು, ಅವರ ಹೆಸರುಗಳನ್ನು ಶಾಂತಕುಮಾರ್ ಬಾಯ್ಬಿಡುತ್ತಿಲ್ಲ’ ಎಂದು ಸಿಐಡಿ ಮೂಲಗಳು ಹೇಳಿವೆ.