‘ಮೊದಲಿಗೆ ನೀವು ರಾಜೀನಾಮೆ ನೀಡಬೇಕು. ಆ ಬಳಿಕ ರಾಷ್ಟ್ರಪತಿಯವರು ವರ್ಚುವಲ್ ಆಗಿ ಸಂಸತ್ ಅಧಿವೇಶನ ಕರೆಯಬೇಕು. ಆ ಮೂಲಕ ರಾಷ್ಟ್ರೀಯ ಸರ್ಕಾರ ರಚನೆಗೆ ದಾರಿ ಮಾಡಿಕೊಡಬೇಕು. ಇದರಿಂದ ಮಾತ್ರ ರಾಷ್ಟ್ರಕ್ಕೆ ಮುಂದೆ ಬರಬಹುದಾದ ಬಿಕ್ಕಟ್ಟನ್ನು ಎದುರಿಸಲು ಸಾಧ್ಯ. ಅಷ್ಟೇ ಅಲ್ಲ ಮೂರನೇ ಕೋವಿಡ್ ಅಲೆಯನ್ನು ತಡೆಯುವುದರ ಜತೆಗೆ, ರಾಜಕೀಯ ಸುಧಾರಣೆಗಳನ್ನು ತರಲು ರಾಷ್ಟ್ರೀಯ ಸರ್ಕಾರ ದಿಂದ ಮಾತ್ರ ಸಾಧ್ಯ’ ಎಂದು ಪ್ರತಿಪಾದಿಸಿದ್ದಾರೆ.