ಬೆಂಗಳೂರು: ವಾಲ್ಮೀಕಿ ಜಾತ್ರೆಗೆ ಬರುವಂತೆ ನಟ ಕಿಚ್ಚ ಸುದೀಪ್ ಅವರಿಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನಿಸಿದ್ದ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಸುದೀಪ್ ಅವರು ಮನೆಯಲ್ಲಿ ಇಲ್ಲದ ಕಾರಣ ಅವರ ತಂದೆ ಸಂಜೀವ್ ಅವರಿಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿದ್ದರು ಎನ್ನಲಾಗಿದೆ.
'ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಜಗಳೂರಿನ ಶಾಸಕ ಎಸ್ ವಿ.ರಾಮಚಂದ್ರಪ್ಪ ಅವರು ಸುದೀಪ್ ಅವರ ಮನೆಗೆ ಭೇಟಿ ನೀಡಿದ್ದರು. ಸುದೀಪ್ ಅವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಅವರ ತಂದೆಯವರಿಗೆ ಆಹ್ವಾನ ಪತ್ರಿಕೆ ನೀಡಲಾಗಿತ್ತು’ ಎಂದು ಕೆ.ಎಂ. ರಂಗನಾಥ್ ಟ್ವೀಟ್ ಮಾಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ಅಂಗವಾಗಿ ಗುರುವಾರ ಸಂಜೆ ನಡೆದ ಸಮಾರಂಭಕ್ಕೆ ನಟ ಕಿಚ್ಚ ಸುದೀಪ್ ಗೈರಾಗಿದ್ದರಿಂದ ಬೇಸರಗೊಂಡ ಅಭಿಮಾನಿಗಳು ವೇದಿಕೆ ಮುಂಭಾಗದ ಕುರ್ಚಿಗಳನ್ನು ಮುರಿದು ಆಕ್ರೋಶ ವ್ಯಕ್ತಪಡಿಸಿದ್ದರು. ವೇದಿಕೆ ಬಳಿ ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ನೆಲಕ್ಕುರುಳಿಸಿದ ಅಭಿಮಾನಿಗಳನ್ನು ನಿಯಂತ್ರಿಸಲು ಮುಂದಾದ ಪೊಲೀಸರ ಪೈಕಿ ಮೂವರು ಗಾಯಗೊಂಡಿದ್ದರು.
ಸುದೀಪ್ ಸ್ಪಷ್ಟನೆ
ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ಅಂಗವಾಗಿ ಗುರುವಾರ ಸಂಜೆ ನಡೆದ ಸಮಾರಂಭಕ್ಕೆ ಗೈರಾಗಿದ್ದಕ್ಕೆ ನಟ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಸ್ನೇಹಿತರಿಗೆ ನಲ್ಮೆಯ ನಮಸ್ಕಾರ -ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು.ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ.ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ.ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ.
— Kichcha Sudeepa (@KicchaSudeep) February 9, 2023
Cont'd...
Contd...
— Kichcha Sudeepa (@KicchaSudeep) February 9, 2023
ಆದರೂ ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ.ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ ..ಮುಂದೆ ಖಂಡಿತ ಬರುವೆ.ಪ್ರೀತಿ ಇರಲಿ.ಶಾಂತರೀತಿಯಿಂದ ವರ್ತಿಸಿ ...
ಪ್ರೀತಿಯೊಂದಿಗೆ ನಿಮ್ಮ
ಕಿಚ್ಚ....
2/2/23ಪ್ರಸನ್ನನಾಂದ ಮಹಾಸ್ವಾಮಿಜೀಯವರು ಹಾಗೂ 2023 ರ ವಾಲ್ಮೀಕಿ ಜಾತ್ರೆಯ ಅದ್ಯಕ್ಷರು ಹಾಗೂ ಜಗಳೂರಿನ ಶಾಸಕರಾದ ಎಸ್ ವಿ.ರಾಮಚಂದ್ರಪ್ಪ .ಕಿಚ್ಚ ಸುದೀಪ್ ರವರ ಮನೆಗೆ ಭೇಟಿ ನೀಡಿ ಸುದೀಪ್ ರವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ತಂದೆಯವರಾದ ಸಂಜೀವ್ ಸರ್ ರವರನ್ನ ಭೇಟಿ ಮಾಡಿ ಸುದೀಪ್ ನವರನ್ನ ಕರೆದುಕೊಂಡು ಬನ್ನಿ ಎಂದು ಆಹ್ವಾನಿಸಲಾಗಿತ್ತು. pic.twitter.com/AAJjXmuXbS
— Ranganath KM (@Ranganathkm94) February 9, 2023
ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.