<p><strong>ಮೈಸೂರು: </strong>ದೇವಾಲಯಗಳನ್ನು ತೆರವು ಮಾಡಿದ್ದು ಸರಿಯಲ್ಲ. ಈ ಬಗ್ಗೆ ಮೊದಲು ಚರ್ಚೆ ಮಾಡಬೇಕಿತ್ತು. ಯಾವುದೇ ಕಾರಣಕ್ಕೂ ದೇಗುಲ ತೆರವು ಮಾಡಬಾರದು ಎಂದು ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.</p>.<p>ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಹಾಗೂ ಮುಂದೆ ಸ್ಪರ್ಧಿಸುವ ಕ್ಷೇತ್ರವೂ ಅಂತಿಮವಾಗಿಲ್ಲ ಎಂದು ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ವಿಧಾನಸಭಾ ಅಧಿವೇಶನ ಮುಗಿದ ನಂತರ ನಾನು ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೂ ಒಟ್ಟಿಗೆ ಮಾಡುವ ಪ್ರವಾಸದ ಕುರಿತು ರೂಪುರೇಷೆ ನಿರ್ಧರಿಸಲಾಗುವುದು ಎಂದು ಹೇಳಿದರು.</p>.<p>ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಮುಂದಿನ ದಿನದಲ್ಲಿ ಇನ್ನು ಉತ್ತಮ ಆಡಳಿತ ನೀಡಲಿದ್ದಾರೆ ಎಂದರು.</p>.<p>ನಂತರ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಶಾಸಕ ಎಸ್.ಎ.ರಾಮದಾಸ್ ಕೆ.ಆರ್.ಕ್ಷೇತ್ರದಲ್ಲಿ ಆಯೋಜಿಸಿದ್ದ ಮೋದಿ ಯುಗ್ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ದೇವಾಲಯಗಳನ್ನು ತೆರವು ಮಾಡಿದ್ದು ಸರಿಯಲ್ಲ. ಈ ಬಗ್ಗೆ ಮೊದಲು ಚರ್ಚೆ ಮಾಡಬೇಕಿತ್ತು. ಯಾವುದೇ ಕಾರಣಕ್ಕೂ ದೇಗುಲ ತೆರವು ಮಾಡಬಾರದು ಎಂದು ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.</p>.<p>ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಹಾಗೂ ಮುಂದೆ ಸ್ಪರ್ಧಿಸುವ ಕ್ಷೇತ್ರವೂ ಅಂತಿಮವಾಗಿಲ್ಲ ಎಂದು ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ವಿಧಾನಸಭಾ ಅಧಿವೇಶನ ಮುಗಿದ ನಂತರ ನಾನು ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೂ ಒಟ್ಟಿಗೆ ಮಾಡುವ ಪ್ರವಾಸದ ಕುರಿತು ರೂಪುರೇಷೆ ನಿರ್ಧರಿಸಲಾಗುವುದು ಎಂದು ಹೇಳಿದರು.</p>.<p>ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಮುಂದಿನ ದಿನದಲ್ಲಿ ಇನ್ನು ಉತ್ತಮ ಆಡಳಿತ ನೀಡಲಿದ್ದಾರೆ ಎಂದರು.</p>.<p>ನಂತರ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಶಾಸಕ ಎಸ್.ಎ.ರಾಮದಾಸ್ ಕೆ.ಆರ್.ಕ್ಷೇತ್ರದಲ್ಲಿ ಆಯೋಜಿಸಿದ್ದ ಮೋದಿ ಯುಗ್ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>