ಕಾನೂನು ವಿಶ್ವವಿದ್ಯಾಲಯಕ್ಕೆ ಜಗಜ್ಯೋತಿ ಬಸವೇಶ್ವರ, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಹಲವರ ಹೆಸರನ್ನು ಇಡಬೇಕೆಂಬ ಬೇಡಿಕೆಗಳು ಬಂದಿದ್ದವು. ಅಂತಿಮವಾಗಿ ‘ಕರ್ನಾಟಕ ಕಾನೂನು ವಿಶ್ವವಿದ್ಯಾಲಯ’ ಎಂಬ ಹೆಸರನ್ನು ಇಡಲಾಗಿತ್ತು. ಸಿದ್ದಪ್ಪ ಕಂಬಳಿ ಅವರು ನಾಡು ಕಂಡ ಮಹಾನ್ ನಾಯಕರಲ್ಲಿ ಒಬ್ಬರು. ಅವರ ಹೆಸರನ್ನು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡುವ ಕುರಿತು ಕಾನೂನು ಸಚಿವರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳ ಜತೆ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.