<p><strong>ಬೆಂಗಳೂರು:</strong> ‘ಕೇಂದ್ರ ಸರ್ಕಾರದ ಆದೇಶದಂತೆ ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ(ಎಸ್ಟಿ) ಜಾತಿ ಪ್ರಮಾಣಪತ್ರ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.</p>.<p>ತಳವಾರ ಸಮಾಜದ ಅಧ್ಯಕ್ಷ ಶಾಣಪ್ಪ ಪೀರಪ್ಪ ಕಣಮೇಶ್ವರ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಅವರನ್ನು ಬುಧವಾರ ಭೇಟಿ ಮಾಡಿತು.</p>.<p>ಸಿಂದಗಿ ಚುನಾವಣಾ ಪ್ರಚಾರಕ್ಕೆ ಇತ್ತೀಚೆಗೆ ಮುಖ್ಯಮಂತ್ರಿ ತೆರಳಿದ್ದ ಸಂದರ್ಭದಲ್ಲಿ ಭೇಟಿ ಮಾಡಿದ್ದ ಸಮುದಾಯದ ಮುಖಂಡರು, ಕೇಂದ್ರ ಸರ್ಕಾರದ ಆದೇಶದಂತೆ ಎಸ್.ಟಿ ಪ್ರಮಾಣಪತ್ರ ನೀಡಲು ಒತ್ತಾಯಿಸಿದ್ದರು. ಸೂಕ್ತ ದಾಖಲಾತಿಯೊಂದಿಗೆ ಬೆಂಗಳೂರಿಗೆ ಬಂದು ಭೇಟಿ ಮಾಡುವಂತೆ ಮುಖ್ಯಮಂತ್ರಿ ತಿಳಿಸಿದ್ದರು.</p>.<p>ಮುಖ್ಯಮಂತ್ರಿ ಭೇಟಿಯ ಬಳಿಕ ಮಾತನಾಡಿದ ಶಾಣಪ್ಪ ಪೀರಪ್ಪ ಕಣಮೇಶ್ವರ್, ‘ನಮ್ಮ ಸಮುದಾಯವನ್ನು ಎಸ್.ಟಿ ಪಟ್ಟಿಗೆ ಸೇರಿಸಬೇಕೆಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿದೆ. ಆದರೆ, ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ’ ಎಂದರು.</p>.<p>‘ಮುಖ್ಯಮಂತ್ರಿ ತಿಳಿಸಿದಂತೆ ದಾಖಲಾತಿಗಳ ಜೊತೆ ಭೇಟಿ ಮಾಡಿದ್ದೇವೆ. ಎಸ್.ಟಿ ಪ್ರಮಾಣಪತ್ರ ನೀಡುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಉಪ ಚುನಾವಣೆಯಲ್ಲಿ ತಳವಾರ ಸಮುದಾಯ ಬಿಜೆಪಿಗೆ ಬೆಂಬಲ ನೀಡಲಿದೆ’ ಎಂದರು.</p>.<p>ಸಮುದಾಯದ ಯುವ ಮುಖಂಡ ಅಮರೇಶ್ ಕಾಮನಕೆರೆ ಮಾತನಾಡಿ, ‘ನಮ್ಮ ಬಹುದಿನಗಳ ಬೇಡಿಕೆ ಈಡೇರಿಸುವವರ ಪರ ನಾವು ನಿಲ್ಲಲ್ಲಿದ್ದೇವೆ. ಬೇಡಿಕೆಯನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಮುಂಬೈ– ಕಲ್ಯಾಣ ಕರ್ನಾಟಕದಲ್ಲಿರುವ ಸಮುದಾಯದ 22 ಲಕ್ಷಕ್ಕೂ ಹೆಚ್ಚು ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.</p>.<p>ನಿಯೋಗದಲ್ಲಿ ತಮ್ಮಣ್ಣ ಸುಣಗಾರ, ಷಣ್ಮಖಪ್ಪ ಸೋಮನಾಯಕ, ಈರಣ್ಣ ಕುರಿ, ಯಲ್ಲುಬಾಳುಡಗಿ, ಶ್ರೀ ಶೈಲಗುಯ್ಯಾರ, ಶಿವಾಜಿ ಮಟಗರ, ಬಸವರಾಜ ತಾವರಖೇಡಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೇಂದ್ರ ಸರ್ಕಾರದ ಆದೇಶದಂತೆ ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ(ಎಸ್ಟಿ) ಜಾತಿ ಪ್ರಮಾಣಪತ್ರ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.</p>.<p>ತಳವಾರ ಸಮಾಜದ ಅಧ್ಯಕ್ಷ ಶಾಣಪ್ಪ ಪೀರಪ್ಪ ಕಣಮೇಶ್ವರ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಅವರನ್ನು ಬುಧವಾರ ಭೇಟಿ ಮಾಡಿತು.</p>.<p>ಸಿಂದಗಿ ಚುನಾವಣಾ ಪ್ರಚಾರಕ್ಕೆ ಇತ್ತೀಚೆಗೆ ಮುಖ್ಯಮಂತ್ರಿ ತೆರಳಿದ್ದ ಸಂದರ್ಭದಲ್ಲಿ ಭೇಟಿ ಮಾಡಿದ್ದ ಸಮುದಾಯದ ಮುಖಂಡರು, ಕೇಂದ್ರ ಸರ್ಕಾರದ ಆದೇಶದಂತೆ ಎಸ್.ಟಿ ಪ್ರಮಾಣಪತ್ರ ನೀಡಲು ಒತ್ತಾಯಿಸಿದ್ದರು. ಸೂಕ್ತ ದಾಖಲಾತಿಯೊಂದಿಗೆ ಬೆಂಗಳೂರಿಗೆ ಬಂದು ಭೇಟಿ ಮಾಡುವಂತೆ ಮುಖ್ಯಮಂತ್ರಿ ತಿಳಿಸಿದ್ದರು.</p>.<p>ಮುಖ್ಯಮಂತ್ರಿ ಭೇಟಿಯ ಬಳಿಕ ಮಾತನಾಡಿದ ಶಾಣಪ್ಪ ಪೀರಪ್ಪ ಕಣಮೇಶ್ವರ್, ‘ನಮ್ಮ ಸಮುದಾಯವನ್ನು ಎಸ್.ಟಿ ಪಟ್ಟಿಗೆ ಸೇರಿಸಬೇಕೆಂದು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿದೆ. ಆದರೆ, ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ’ ಎಂದರು.</p>.<p>‘ಮುಖ್ಯಮಂತ್ರಿ ತಿಳಿಸಿದಂತೆ ದಾಖಲಾತಿಗಳ ಜೊತೆ ಭೇಟಿ ಮಾಡಿದ್ದೇವೆ. ಎಸ್.ಟಿ ಪ್ರಮಾಣಪತ್ರ ನೀಡುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಉಪ ಚುನಾವಣೆಯಲ್ಲಿ ತಳವಾರ ಸಮುದಾಯ ಬಿಜೆಪಿಗೆ ಬೆಂಬಲ ನೀಡಲಿದೆ’ ಎಂದರು.</p>.<p>ಸಮುದಾಯದ ಯುವ ಮುಖಂಡ ಅಮರೇಶ್ ಕಾಮನಕೆರೆ ಮಾತನಾಡಿ, ‘ನಮ್ಮ ಬಹುದಿನಗಳ ಬೇಡಿಕೆ ಈಡೇರಿಸುವವರ ಪರ ನಾವು ನಿಲ್ಲಲ್ಲಿದ್ದೇವೆ. ಬೇಡಿಕೆಯನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಮುಂಬೈ– ಕಲ್ಯಾಣ ಕರ್ನಾಟಕದಲ್ಲಿರುವ ಸಮುದಾಯದ 22 ಲಕ್ಷಕ್ಕೂ ಹೆಚ್ಚು ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.</p>.<p>ನಿಯೋಗದಲ್ಲಿ ತಮ್ಮಣ್ಣ ಸುಣಗಾರ, ಷಣ್ಮಖಪ್ಪ ಸೋಮನಾಯಕ, ಈರಣ್ಣ ಕುರಿ, ಯಲ್ಲುಬಾಳುಡಗಿ, ಶ್ರೀ ಶೈಲಗುಯ್ಯಾರ, ಶಿವಾಜಿ ಮಟಗರ, ಬಸವರಾಜ ತಾವರಖೇಡಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>