ಮೀನುಗಾರಿಕೆ ಇಲಾಖೆ ಹಾಗೂ ಫ್ರೀಡಂ ಆ್ಯಪ್ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ಒಳನಾಡು ಮೀನು ಉತ್ಪಾದಕರ ಸಮಾವೇಶ' ಉದ್ಘಾಟಿಸಿ ಮಾತನಾಡಿದ ಅವರು, ‘ಮೀನು ಸಸ್ಯಾಹಾರಿ. ಮೀನು ತಿನ್ನುವವರು ಮಾತ್ರ ಮಾಂಸಾಹಾರಿಗಳು. ಮೀನಿನ ಆಹಾರಕ್ಕೆ ಹೆಚ್ಚು ಬೇಡಿಕೆ ಇದ್ದು, ಮೀನುಗಾರಿಕೆ ಬೃಹತ್ ಉದ್ಯಮವಾಗಿ ಬೆಳೆದಿದೆ. ಮೀನು ರಫ್ತಿನಲ್ಲಿ ಆಂಧ್ರಪ್ರದೇಶ ಮುಂಚೂಣಿಯಲ್ಲಿದ್ದು, ಕರ್ನಾಟಕವೂ ಮೀನುಗಾರಿಕೆ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕಿದೆ’ ಎಂದರು. ‘ರಾಜ್ಯದ 5,000 ಮೀನುಗಾರರ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಮಂಜೂರಾತಿ ನೀಡಲಾಗಿದೆ. ಜನವರಿಯೊಳಗೆ ಮನೆಗಳು ನಿರ್ಮಾಣವಾದರೆ, ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು’ ಎಂದು ಹೇಳಿದರು.