₹1,024 ಕೋಟಿ ಮೊತ್ತದ ಕಾಮಗಾರಿಗೆ ಚಾಲನೆ
ಯಾದಗಿರಿ: ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ ₹1,024 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವ 78 ಕಾಮಗಾರಿಗಳಿಗೆ ಶಂಕುಸ್ಥಾಪನೆ, ₹ 36 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 24 ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ನೆರವೇರಿಸಿದರು.ಕಂದಾಯ ಸಚಿವ ಆರ್.ಅಶೋಕ ದೇವತ್ಕಲ್ನಲ್ಲಿ ಗ್ರಾಮ ವಾಸ್ತವ್ಯಮಾಡಿದರು.