ವಿಧಾನಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಜೆಡಿಎಸ್ನ ಎಚ್.ಡಿ. ರೇವಣ್ಣ, ಕೆ.ಎಂ. ಶಿವಲಿಂಗೇಗೌಡ ಮತ್ತಿತರರು, ‘ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಸ್ಥಗಿತಗೊಂಡಿದೆ. ರೈತರು ರಾಗಿ ಚೀಲಗಳೊಂದಿಗೆ ಖರೀದಿ ಕೇಂದ್ರಗಳಲ್ಲಿ ಕಾಯುತ್ತಿದ್ದಾರೆ. ತಕ್ಷಣವೇ ರಾಗಿ ಖರೀದಿಸಬೇಕು’ ಎಂದು ಆಗ್ರಹಿಸಿದರು.