ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಬಾರಿ ಸಿದ್ದರಾಮಯ್ಯ ಮನೆಗೆ ಹೋಗುವುದು ಖಚಿತ: ಸಿಎಂ ಬೊಮ್ಮಾಯಿ ಭವಿಷ್ಯ

Last Updated 10 ಡಿಸೆಂಬರ್ 2022, 9:56 IST
ಅಕ್ಷರ ಗಾತ್ರ

ಮೈಸೂರು: 'ಮುಂಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಿದ್ದರಾಮಯ್ಯ ಮನೆಗೆ ಹೋಗುವುದು ಖಚಿತ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದರು.

'ನಾವು ಸುಮ್ಮನೆ ಕುಳಿತರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಅವರು ಹೇಳಿರುವುದನ್ನು ಗಮನಿಸಿದ್ದೇನೆ. ಅವರು ಮನೆಗೆ ಹೋಗುವ ಕಾರ್ಯಕ್ರಮ‌ ಇದೆ. ಹೀಗಾಗಿಯೇ ಅವರು ಅಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ' ಎಂದರು.

'ಗುಜರಾತ್ ಚುನಾವಣೆಯ ನಂತರ ಸಹಜವಾಗಿಯೇ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲ ತಯಾರಿಯನ್ನೂ ನಡೆಸುತ್ತಿದ್ದೇವೆ. ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಅತಿ ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅದಕ್ಕಾಗಿ ಎಲ್ಲ ತಯಾರಿ ನಡೆಸಿದ್ದೇವೆ' ಎಂದು ತಿಳಿಸಿದರು.

'ಅವಧಿಗೆ ಮುನ್ನ ಚುನಾವಣೆ ಬರಲಿದೆಯೇ' ಎಂಬ ಪ್ರಶ್ನೆಗೆ, 'ಇಂಥವೆಲ್ಲ ನಿಮಗೆ ಯಾರು ಹೇಳುತಾರ್ರೀ' ಎಂದು ಗರಂ ಆಗಿ ಪ್ರತಿಕ್ರಿಯಿಸಿ ತೆರಳಿದರು.

ಶಾಸಕ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT