ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

45 ಲಕ್ಷ ರೈತರ ಮನೆ ಬಾಗಿಲಿಗೆ ಉಚಿತವಾಗಿ ಪಹಣಿ, ಇತರ ದಾಖಲೆ ವಿತರಣೆ: ಆರ್.ಅಶೋಕ

Last Updated 31 ಡಿಸೆಂಬರ್ 2021, 10:29 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿರುವ ಸುಮಾರು 45 ಲಕ್ಷ ರೈತರ ಮನೆ ಬಾಗಿಲಿಗೆ ಉಚಿತವಾಗಿ ಪಹಣಿ ಮತ್ತು ಇತರ ದಾಖಲೆಗಳನ್ನು ಜನವರಿ 26ರಂದು ತಲುಪಿಸಲು ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು.

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿವಿಧೆಡೆ 50–60 ವರ್ಷಗಳಿಂದ ಇನಾಂ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಲ ಪಡೆಯುವುದು ಕಷ್ಟಕರವಾಗಿ ಪರಿಣಮಿಸಿದೆ. ಸೂಕ್ತ ದಾಖಲೆಗಳಿಲ್ಲದೆ, ತಿಳಿವಳಿಕೆ ಕೊರತೆಯಿಂದ ಅನೇಕ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಉಚಿತವಾಗಿ ಅವರಿಗೆ ದಾಖಲೆಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ದಶಕಗಳಿಂದ ಇನಾಂ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಬೆಳೆ ಪರಿಹಾರ, ಇತರ ಸೌಲಭ್ಯಗಳು ತಲುಪುತ್ತಿಲ್ಲ. ಇದಕ್ಕಾಗಿ ಮನೆ ಬಾಗಿಲಿಗೆ ಸೇವೆ ಒದಗಿಸಲಾಗುವುದು. ಜನವರಿ 26ರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳು ನಿರ್ದಿಷ್ಟ ಹಳ್ಳಿಗೆ ತೆರಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ರಾಜ್ಯದಾದ್ಯಂತ ಅಧಿಕಾರಿಗಳು ಪಹಣಿ ಹಾಗೂ ಇತರ ದಾಖಲೆಗಳನ್ನು ಉಚಿತವಾಗಿ ವಿತರಿಸಲಿದ್ದಾರೆ. ಒಂದೇ ದಿನ ದಾಖಲೆ ವಿತರಣೆ ಕಾರ್ಯಕ್ರಮ ಪೂರ್ತಿಗೊಳಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ರಾಜ್ಯ ವಿವಿಧೆಡೆ ಇನಾಂ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಪಹಣಿ ನೀಡುವ ಸಂಬಂಧ ಅರ್ಜಿ ಸಲ್ಲಿಸುವ ಅವಧಿಯನ್ನು ಇನ್ನೂ ಒಂದು ವರ್ಷ ಮುಂದುವರಿಸಲು ಡಿಸೆಂಬರ್ 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT