<p><strong>ಹುಬ್ಬಳ್ಳಿ</strong>: ‘ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದರೆ ಕ್ರೈಸ್ತರು ಆತಂಕ ಪಡುವ ಅಗತ್ಯವಿಲ್ಲ. ಅವರ ಧಾರ್ಮಿಕ ಆಚರಣೆಗೆ ಯಾವುದೇ ಕುತ್ತು ಬರುವುದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆ ಮೂಲಕ ಬೆಳಗಾವಿ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಮಸೂದೆ ಮಂಡನೆ ಮಾಡುವ ಸುಳಿವು ನೀಡಿದರು.</p>.<p>ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಡತನ, ಮನೆಯ ಪರಿಸ್ಥಿತಿ ದುರುಪಯೋಗಪಡಿಸಿಕೊಂಡು ಹಾಗೂಆಮಿಷ ಒಡ್ಡಿ ಮತಾಂತರಕ್ಕೆ ಯತ್ನಿಸುವವರಿಗೆ ಕಡಿವಾಣ ಹಾಕಲು ಕಾಯ್ದೆ ಅನುಕೂಲವಾಗಲಿದೆ. ಸ್ವಾತಂತ್ರ್ಯಾನಂತರ ಈ ಬಗ್ಗೆ ಅನೇಕ ಬಾರಿ ಚರ್ಚೆಗಳಾಗಿವೆ. ಹಲವು ರಾಜ್ಯಗಳಲ್ಲಿ ಜಾರಿಗೆ ಬಂದಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾಗಬೇಕು ಎಂಬುದು ಬಹಳಷ್ಟು ಜನರ ಒತ್ತಾಸೆಯಾಗಿದೆ’ ಎಂದರು.</p>.<p>’ಕಾಯ್ದೆ ಬಗ್ಗೆ ಕಾನೂನು ಇಲಾಖೆ ಕರಡು ಸಿದ್ಧಪಡಿಸುತ್ತಿದ್ದು, ಸೋಮವಾರ ಆರಂಭವಾಗಲಿರುವ ಬೆಳಗಾವಿ ಅಧಿವೇಶನದಲ್ಲಿ ಈ ಮಸೂದೆಯ ಕುರಿತು ಚರ್ಚೆಯಾಗಲಿದೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಹೀಗೆ ಎಲ್ಲವೂ ಸಂವಿಧಾನದಲ್ಲಿ ಗುರುತಿಸಲಾದ ಧರ್ಮಗಳಾಗಿವೆ. ಯಾರ ಪ್ರಾರ್ಥನೆ, ಆಚರಣೆ, ಧಾರ್ಮಿಕ ಭಾವನೆಗಳಿಗೂ ಧಕ್ಕೆ ತರದ ಹಾಗೆ ಕ್ರಮ ಕೈಗೊಳ್ಳಲಾಗುವುದು‘ ಎಂದು ಸ್ಪಷ್ಟಪಡಿಸಿದರು.</p>.<p>‘ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಯಾವುದೇ ಮನೆಗೆ, ಮನಸ್ಸುಗಳಿಗೆ ಕೆಟ್ಟದಾಗಬಾರದು. ಬಡವರು, ದೀನದಲಿತರು ಇದಕ್ಕೆ ಬಲಿಯಾಗಬಾರದು ಎನ್ನುವ ಕಾರಣಕ್ಕೆ ಕಾನೂನು ಜಾರಿಗೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ’ ಎಂದರು.</p>.<p>ಬೆಳಗಾವಿ ಅಧಿವೇಶನದ ಬಗ್ಗೆ ಪ್ರತಿಕ್ರಿಯಿಸಿ ‘ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಪ್ರಮುಖ ವಿಷಯಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಬೇಕು ಎನ್ನುವ ಆಸೆ ನಮ್ಮದು. ಸಮಗ್ರ ಕರ್ನಾಟಕ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು’ ಎಂದರು.</p>.<p><strong>ಅಂಗೀಕರಿಸಲಿ:</strong> ‘ಮತಾಂತರ ನಿಷೇಧ ಮಸೂದೆಯನ್ನು ಬೆಳಗಾವಿ ಅಧಿವೇಶನದಲ್ಲಿಯೇ ಮಂಡಿಸಿ, ಅಂಗೀಕರಿಸಬೇಕು’ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ‘ಜನರ ಬಡತನ, ಅಸಹಾಯಕತೆ ದುರುಪಯೋಗ ಪಡಿಸಿಕೊಂಡು ಮತಾಂತರ ಮಾಡಲು ಅವಕಾಶ ಕೊಡಬಾರದು.ಸರ್ಕಾರ ಕೂಡ ಸಮಾಜದ ಎಲ್ಲ ವರ್ಗಗಳ ಜನರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು’ ಎಂದರು.</p>.<p class="Subhead"><strong>‘ಮನೆಯವರೇ ಮತಾಂತರವಾದರೆ ಸುಮ್ಮನಿರುತ್ತೀರಾ’:</strong> ‘ತಮ್ಮ ಮನೆಯ ಸದಸ್ಯರೇ ಮತಾಂತರ ಆದಲ್ಲಿ ಕಾಂಗ್ರೆಸ್ ನಾಯಕರು ಸುಮ್ಮನೆ ಕೂರುವರಾ’ ಎಂದು ಕೇಂದ್ರ ಸಬಲೀಕರಣ ಹಾಗೂ ಸಾಮಾಜಿಕ ನ್ಯಾಯ ಸಚಿವ ಎ. ನಾರಾಯಣಸ್ವಾಮಿ ಚಿತ್ರದುರ್ಗದಲ್ಲಿ ಪ್ರಶ್ನಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನೇ ಹೇಳಿದರೂ ಧರ್ಮ–ಧರ್ಮಗಳ ಮಧ್ಯೆ ಕಂದಕ ಸೃಷ್ಟಿಸುತ್ತಿರುವ ಮತಾಂತರಕ್ಕೆ ಬಿಜೆಪಿ ವಿರೋಧವಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದರೆ ಕ್ರೈಸ್ತರು ಆತಂಕ ಪಡುವ ಅಗತ್ಯವಿಲ್ಲ. ಅವರ ಧಾರ್ಮಿಕ ಆಚರಣೆಗೆ ಯಾವುದೇ ಕುತ್ತು ಬರುವುದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆ ಮೂಲಕ ಬೆಳಗಾವಿ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಮಸೂದೆ ಮಂಡನೆ ಮಾಡುವ ಸುಳಿವು ನೀಡಿದರು.</p>.<p>ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಡತನ, ಮನೆಯ ಪರಿಸ್ಥಿತಿ ದುರುಪಯೋಗಪಡಿಸಿಕೊಂಡು ಹಾಗೂಆಮಿಷ ಒಡ್ಡಿ ಮತಾಂತರಕ್ಕೆ ಯತ್ನಿಸುವವರಿಗೆ ಕಡಿವಾಣ ಹಾಕಲು ಕಾಯ್ದೆ ಅನುಕೂಲವಾಗಲಿದೆ. ಸ್ವಾತಂತ್ರ್ಯಾನಂತರ ಈ ಬಗ್ಗೆ ಅನೇಕ ಬಾರಿ ಚರ್ಚೆಗಳಾಗಿವೆ. ಹಲವು ರಾಜ್ಯಗಳಲ್ಲಿ ಜಾರಿಗೆ ಬಂದಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾಗಬೇಕು ಎಂಬುದು ಬಹಳಷ್ಟು ಜನರ ಒತ್ತಾಸೆಯಾಗಿದೆ’ ಎಂದರು.</p>.<p>’ಕಾಯ್ದೆ ಬಗ್ಗೆ ಕಾನೂನು ಇಲಾಖೆ ಕರಡು ಸಿದ್ಧಪಡಿಸುತ್ತಿದ್ದು, ಸೋಮವಾರ ಆರಂಭವಾಗಲಿರುವ ಬೆಳಗಾವಿ ಅಧಿವೇಶನದಲ್ಲಿ ಈ ಮಸೂದೆಯ ಕುರಿತು ಚರ್ಚೆಯಾಗಲಿದೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಹೀಗೆ ಎಲ್ಲವೂ ಸಂವಿಧಾನದಲ್ಲಿ ಗುರುತಿಸಲಾದ ಧರ್ಮಗಳಾಗಿವೆ. ಯಾರ ಪ್ರಾರ್ಥನೆ, ಆಚರಣೆ, ಧಾರ್ಮಿಕ ಭಾವನೆಗಳಿಗೂ ಧಕ್ಕೆ ತರದ ಹಾಗೆ ಕ್ರಮ ಕೈಗೊಳ್ಳಲಾಗುವುದು‘ ಎಂದು ಸ್ಪಷ್ಟಪಡಿಸಿದರು.</p>.<p>‘ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಯಾವುದೇ ಮನೆಗೆ, ಮನಸ್ಸುಗಳಿಗೆ ಕೆಟ್ಟದಾಗಬಾರದು. ಬಡವರು, ದೀನದಲಿತರು ಇದಕ್ಕೆ ಬಲಿಯಾಗಬಾರದು ಎನ್ನುವ ಕಾರಣಕ್ಕೆ ಕಾನೂನು ಜಾರಿಗೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ’ ಎಂದರು.</p>.<p>ಬೆಳಗಾವಿ ಅಧಿವೇಶನದ ಬಗ್ಗೆ ಪ್ರತಿಕ್ರಿಯಿಸಿ ‘ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಪ್ರಮುಖ ವಿಷಯಗಳ ಬಗ್ಗೆ ಅರ್ಥಪೂರ್ಣ ಚರ್ಚೆಯಾಗಬೇಕು ಎನ್ನುವ ಆಸೆ ನಮ್ಮದು. ಸಮಗ್ರ ಕರ್ನಾಟಕ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು’ ಎಂದರು.</p>.<p><strong>ಅಂಗೀಕರಿಸಲಿ:</strong> ‘ಮತಾಂತರ ನಿಷೇಧ ಮಸೂದೆಯನ್ನು ಬೆಳಗಾವಿ ಅಧಿವೇಶನದಲ್ಲಿಯೇ ಮಂಡಿಸಿ, ಅಂಗೀಕರಿಸಬೇಕು’ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ‘ಜನರ ಬಡತನ, ಅಸಹಾಯಕತೆ ದುರುಪಯೋಗ ಪಡಿಸಿಕೊಂಡು ಮತಾಂತರ ಮಾಡಲು ಅವಕಾಶ ಕೊಡಬಾರದು.ಸರ್ಕಾರ ಕೂಡ ಸಮಾಜದ ಎಲ್ಲ ವರ್ಗಗಳ ಜನರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು’ ಎಂದರು.</p>.<p class="Subhead"><strong>‘ಮನೆಯವರೇ ಮತಾಂತರವಾದರೆ ಸುಮ್ಮನಿರುತ್ತೀರಾ’:</strong> ‘ತಮ್ಮ ಮನೆಯ ಸದಸ್ಯರೇ ಮತಾಂತರ ಆದಲ್ಲಿ ಕಾಂಗ್ರೆಸ್ ನಾಯಕರು ಸುಮ್ಮನೆ ಕೂರುವರಾ’ ಎಂದು ಕೇಂದ್ರ ಸಬಲೀಕರಣ ಹಾಗೂ ಸಾಮಾಜಿಕ ನ್ಯಾಯ ಸಚಿವ ಎ. ನಾರಾಯಣಸ್ವಾಮಿ ಚಿತ್ರದುರ್ಗದಲ್ಲಿ ಪ್ರಶ್ನಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನೇ ಹೇಳಿದರೂ ಧರ್ಮ–ಧರ್ಮಗಳ ಮಧ್ಯೆ ಕಂದಕ ಸೃಷ್ಟಿಸುತ್ತಿರುವ ಮತಾಂತರಕ್ಕೆ ಬಿಜೆಪಿ ವಿರೋಧವಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>