<p><strong>ಬೆಂಗಳೂರು:</strong> ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲ. ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನ್ನ ನಿರ್ಣಯಗಳು ಇನ್ನಷ್ಟು ಗಟ್ಟಿಯಾಗುತ್ತವೆ. ಇನ್ನೂ ಹೆಚ್ಚಿನ ಕೆಲಸವನ್ನು ಜನರಿಗೆ, ರಾಜ್ಯಕ್ಕೆ ಮಾಡಬೇಕೆಂಬ ಪ್ರೇರಣೆಯನ್ನು ಈ ಎಲ್ಲಾ ವಿಚಾರಗಳು ಕೊಟ್ಟಿವೆ. ದಿನಕ್ಕೆ ಇನ್ನೂ 2 ಗಂಟೆಗಳ ಹೆಚ್ಚಿನ ಕೆಲಸ, ರಾಜ್ಯದ ಅಭಿವೃದ್ಧಿಗೆ ಅತಿ ಹೆಚ್ಚು ಸಮಯವನ್ನು ನೀಡಲಾಗುವುದು. ಬರುವ ದಿನಗಳಲ್ಲಿ ಪಕ್ಷದ ಬಲವರ್ಧನೆ ಹಾಗೂ ಜನರ ಬಳಿಗೆ ಹೋಗುವ ಕೆಲಸವನ್ನು ದೊಡ್ಡ ಪ್ರಮಾಣದಲ್ಲಿ ಮಾಡಲಾಗುವುದು’ ಎಂದರು.</p>.<p>ಕಾಂಗ್ರೆಸ್ನವರುಏನೋ ಅಂದುಕೊಂಡಿದ್ದಾರೆ. ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ತುಂಬಾ ಜನರ ಮನಸ್ಸಿನಲ್ಲಿ ಹರಡಬೇಕೆಂದಿದ್ದಾರೆ. ಜನ ಯಾರೂ ಅದನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಸ್ಥಿತಪ್ರಜ್ಞನಾಗಿದ್ದೇನೆ. ಸತ್ಯ ನನಗೆ ಗೊತ್ತಿದೆ ಎಂದು ತಿಳಿಸಿದರು.</p>.<p><strong>ಓದಿ...<a href="https://www.prajavani.net/karnataka-news/no-cm-change-in-karnataka-says-bs-yediyurappa-962065.html" target="_blank">ಸಿಎಂ ಬದಲಾವಣೆ ಇಲ್ಲ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಬಹುದು: ಯಡಿಯೂರಪ್ಪ</a></strong></p>.<p><strong>ಮಳೆಯಿಂದ ಹಾನಿ: ಕೇಂದ್ರಕ್ಕೆ ಮನವಿ</strong><br />ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು ನಡೆಯುತ್ತಿರುವ ಸಮೀಕ್ಷೆಯ ವರದಿ ಶೀಘ್ರ ಸಲ್ಲಿಕೆಯಾಗಲಿದೆ. ಹೆಚ್ಚಿನ ಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಸಿಎಂ ಬೊಮ್ಮಾಯಿತಿಳಿಸಿದರು.</p>.<p>ಇತ್ತೀಚೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಮೂಲ ಸೌಕರ್ಯಗಳು ಹಾಳಾಗಿವೆ. ತುರ್ತು ಕೆಲಸಕ್ಕಾಗಿ ರಾಜ್ಯ ಸರ್ಕಾರ ₹500ಕೋಟಿ ಬಿಡುಗಡೆ ಮಾಡಲಾಗಿದೆ.ಬೆಳೆ ಹಾನಿಯಾಗಿದೆ. ಅದರ ಸಮೀಕ್ಷೆ ನಡೆಯುತ್ತಿದೆ ಎಂದು ತಿಳಿಸಿದರು.</p>.<p><a href="https://www.prajavani.net/karnataka-news/chief-minister-changes-in-karnataka-matter-bjp-and-congress-leaders-criticism-continued-962037.html" itemprop="url" target="_blank">ಮುಖ್ಯಮಂತ್ರಿ ಬದಲಾವಣೆ ವದಂತಿ: ಮುಂದುವರಿದ ಬಿಜೆಪಿ– ಕಾಂಗ್ರೆಸ್ ವಾಗ್ಯುದ್ಧ</a></p>.<p><strong>ಈದ್ಗಾ ಮೈದಾನ: ಕಾನೂನಿನ ಪ್ರಕಾರ ಸಭೆ ಸಮಾರಂಭ ಆಯೋಜನೆ</strong><br />ಚಾಮರಾಜಪೇಟೆಯ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಸರ್ಕಾರದ ನೀತಿ ನಿಯಮಗಳ ಪ್ರಕಾರ ಸಭೆ ಸಮಾರಂಭಗಳು, ಉತ್ಸವಗಳನ್ನು ಕಾನೂನಿನ ಪ್ರಕಾರ ಕೈಗೊಳ್ಳಲಾಗುವುದು ಎಂದರು. ಯಾರೂ ಏನೇ ಹೇಳಿದರೂ ನಮಗೆ ಕಾನೂನು ಮುಖ್ಯ. ಕಾನೂನು ಬಿಟ್ಟು ಏನೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲ. ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನ್ನ ನಿರ್ಣಯಗಳು ಇನ್ನಷ್ಟು ಗಟ್ಟಿಯಾಗುತ್ತವೆ. ಇನ್ನೂ ಹೆಚ್ಚಿನ ಕೆಲಸವನ್ನು ಜನರಿಗೆ, ರಾಜ್ಯಕ್ಕೆ ಮಾಡಬೇಕೆಂಬ ಪ್ರೇರಣೆಯನ್ನು ಈ ಎಲ್ಲಾ ವಿಚಾರಗಳು ಕೊಟ್ಟಿವೆ. ದಿನಕ್ಕೆ ಇನ್ನೂ 2 ಗಂಟೆಗಳ ಹೆಚ್ಚಿನ ಕೆಲಸ, ರಾಜ್ಯದ ಅಭಿವೃದ್ಧಿಗೆ ಅತಿ ಹೆಚ್ಚು ಸಮಯವನ್ನು ನೀಡಲಾಗುವುದು. ಬರುವ ದಿನಗಳಲ್ಲಿ ಪಕ್ಷದ ಬಲವರ್ಧನೆ ಹಾಗೂ ಜನರ ಬಳಿಗೆ ಹೋಗುವ ಕೆಲಸವನ್ನು ದೊಡ್ಡ ಪ್ರಮಾಣದಲ್ಲಿ ಮಾಡಲಾಗುವುದು’ ಎಂದರು.</p>.<p>ಕಾಂಗ್ರೆಸ್ನವರುಏನೋ ಅಂದುಕೊಂಡಿದ್ದಾರೆ. ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ತುಂಬಾ ಜನರ ಮನಸ್ಸಿನಲ್ಲಿ ಹರಡಬೇಕೆಂದಿದ್ದಾರೆ. ಜನ ಯಾರೂ ಅದನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಸ್ಥಿತಪ್ರಜ್ಞನಾಗಿದ್ದೇನೆ. ಸತ್ಯ ನನಗೆ ಗೊತ್ತಿದೆ ಎಂದು ತಿಳಿಸಿದರು.</p>.<p><strong>ಓದಿ...<a href="https://www.prajavani.net/karnataka-news/no-cm-change-in-karnataka-says-bs-yediyurappa-962065.html" target="_blank">ಸಿಎಂ ಬದಲಾವಣೆ ಇಲ್ಲ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಬಹುದು: ಯಡಿಯೂರಪ್ಪ</a></strong></p>.<p><strong>ಮಳೆಯಿಂದ ಹಾನಿ: ಕೇಂದ್ರಕ್ಕೆ ಮನವಿ</strong><br />ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು ನಡೆಯುತ್ತಿರುವ ಸಮೀಕ್ಷೆಯ ವರದಿ ಶೀಘ್ರ ಸಲ್ಲಿಕೆಯಾಗಲಿದೆ. ಹೆಚ್ಚಿನ ಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಸಿಎಂ ಬೊಮ್ಮಾಯಿತಿಳಿಸಿದರು.</p>.<p>ಇತ್ತೀಚೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಮೂಲ ಸೌಕರ್ಯಗಳು ಹಾಳಾಗಿವೆ. ತುರ್ತು ಕೆಲಸಕ್ಕಾಗಿ ರಾಜ್ಯ ಸರ್ಕಾರ ₹500ಕೋಟಿ ಬಿಡುಗಡೆ ಮಾಡಲಾಗಿದೆ.ಬೆಳೆ ಹಾನಿಯಾಗಿದೆ. ಅದರ ಸಮೀಕ್ಷೆ ನಡೆಯುತ್ತಿದೆ ಎಂದು ತಿಳಿಸಿದರು.</p>.<p><a href="https://www.prajavani.net/karnataka-news/chief-minister-changes-in-karnataka-matter-bjp-and-congress-leaders-criticism-continued-962037.html" itemprop="url" target="_blank">ಮುಖ್ಯಮಂತ್ರಿ ಬದಲಾವಣೆ ವದಂತಿ: ಮುಂದುವರಿದ ಬಿಜೆಪಿ– ಕಾಂಗ್ರೆಸ್ ವಾಗ್ಯುದ್ಧ</a></p>.<p><strong>ಈದ್ಗಾ ಮೈದಾನ: ಕಾನೂನಿನ ಪ್ರಕಾರ ಸಭೆ ಸಮಾರಂಭ ಆಯೋಜನೆ</strong><br />ಚಾಮರಾಜಪೇಟೆಯ ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಸರ್ಕಾರದ ನೀತಿ ನಿಯಮಗಳ ಪ್ರಕಾರ ಸಭೆ ಸಮಾರಂಭಗಳು, ಉತ್ಸವಗಳನ್ನು ಕಾನೂನಿನ ಪ್ರಕಾರ ಕೈಗೊಳ್ಳಲಾಗುವುದು ಎಂದರು. ಯಾರೂ ಏನೇ ಹೇಳಿದರೂ ನಮಗೆ ಕಾನೂನು ಮುಖ್ಯ. ಕಾನೂನು ಬಿಟ್ಟು ಏನೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>