<p><strong>ಬೆಂಗಳೂರು</strong>: ‘ನಾಲ್ಕು ವರ್ಷದಿಂದ ಪ್ರವಾಹ, ಭೂಕುಸಿತ ಎದುರಿಸುತ್ತಿದ್ದೇವೆ. ಎನ್ಡಿಆರ್ಎಫ್ (ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ) ಪರಿಹಾರ ಮಾರ್ಗಸೂಚಿ ಬದಲಿಸಿ ರಾಜ್ಯಕ್ಕೆ ಹೆಚ್ಚುವರಿ ಪರಿಹಾರ ನೀಡಲು ಶಿಫಾರಸು ಮಾಡಬೇಕು’ ಎಂದು ಪ್ರವಾಹ ಅಧ್ಯಯನಕ್ಕೆ ಬಂದ ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.</p>.<p>ಮುಖ್ಯಮಂತ್ರಿ ಅವರನ್ನು ಕೇಂದ್ರ ಗೃಹ ಸಚಿವಾಲಯದ ಸುಶೀಲ್ ಪಾಲ್ ನೇತೃತ್ವದ ತಂಡ ಶನಿವಾರ ಭೇಟಿ ಮಾಡಿ ರಾಜ್ಯದಲ್ಲಿ ಅತಿವೃಷ್ಟಿ ಯಿಂದ ಉಂಟಾಗಿರುವ ಹಾನಿ ಕುರಿತು ಚರ್ಚೆ ನಡೆಸಿತು.</p>.<p>‘ಪ್ರವಾಹ ಸಂತಸ್ತರಿಗೆ ರಕ್ಷಣೆ ಮತ್ತು ತುರ್ತು ಪರಿಹಾರವನ್ನು ಸರ್ಕಾರ ನೀಡಿದೆ. ಆದರೆ, ಜನರ ಪುನರ್ವಸತಿಗೆ ಹೆಚ್ಚಿನ ನೆರವಿನ ಅಗತ್ಯವಿದೆ. ಉತ್ತರ ಕನ್ನಡ ಜಿಲ್ಲೆಯ ಹಾನಿ ಪರಿಶೀಲಿಸಿ ₹ 100 ಕೋಟಿ ತಕ್ಷಣ ಬಿಡುಗಡೆ ಮಾಡಿದ್ದು, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ₹ 500 ಕೋಟಿ ಒದಗಿಸಲಾಗಿದೆ’ ಎಂದು ಬೊಮ್ಮಾಯಿ ಹೇಳಿದರು.</p>.<p>‘ವಾಸ್ತವಾಂಶಗಳನ್ನು ಕೇಂದ್ರ ತಂಡದ ಮುಂದಿಡಲಾಗಿದೆ. ಈಗ ಕ್ಷಣ ಕ್ಷಣದ ಮಾಹಿತಿ ಕೇಂದ್ರಕ್ಕೂ ಲಭ್ಯವಿದೆ. ನಾಲ್ಕು ವರ್ಷಗಳಿಂದ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಪ್ರತಿವರ್ಷ ಕುಟುಂಬಗಳ ಸ್ಥಳಾಂತರ, ಮನೆ ಕಳೆದುಕೊಳ್ಳುವ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ’ ಎಂದು ಹೇಳಿದರು.</p>.<p>‘15 ವರ್ಷಗಳಲ್ಲಿ ರಸ್ತೆ, ವಿದ್ಯುತ್ ಮತ್ತಿತರ ಸಾರ್ವಜನಿಕ ಸೌಲಭ್ಯಗಳಿಗೆ ಭಾರಿ ಹೂಡಿಕೆ ಮಾಡಲಾಗಿದೆ. ಅವುಗಳನ್ನು ಮರು ಸ್ಥಾಪಿಸುವುದು ಸವಾಲಿನ ಕೆಲಸ. ಪ್ರವಾಹದಿಂದ ಬೆಳೆ ನಷ್ಟವಾಗಿ ರೈತರು ತೊಂದರೆ ಅನುಭವಿಸಿದ್ದಾರೆ. ಆದ್ದರಿಂದ, ರಾಜ್ಯಕ್ಕೆ ಗರಿಷ್ಠ ಪ್ರಮಾಣದ ನೆರವು ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಸುಶೀಲ್ ಪಾಲ್ ಮಾತನಾಡಿ, ‘ರಾಜ್ಯ ಸರ್ಕಾರ ವಸ್ತುನಿಷ್ಠ ವರದಿ ಸಲ್ಲಿಸಿದೆ’ ಎಂದರು.</p>.<p><strong>‘ತುರ್ತು ಬೆಳೆ ಪರಿಹಾರ ₹ 38.65 ಕೋಟಿ’</strong><br />‘ರಾಜ್ಯದ 15 ಜಿಲ್ಲೆಗಳ 86 ತಾಲ್ಲೂಕುಗಳನ್ನು ಪ್ರವಾಹಪೀಡಿತ ಎಂದು ಘೋಷಿಸಿದ್ದು, ₹ 5,690 ಕೋಟಿ ನಷ್ಟ ಅಂದಾಜಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಸುಮಾರು ₹ 765.84 ಕೋಟಿ ನಷ್ಟ ಆಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.</p>.<p>ವಿಪತ್ತು ಪರಿಹಾರ ಘಟಕದ ಅಧಿಕಾರಿಗಳ ಜೊತೆ ಶನಿವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬೆಳೆ ಪರಿಹಾರ ನೀಡಲು 13 ಜಿಲ್ಲೆಗಳ 45,586 ಫಲಾನುಭವಿಗಳನ್ನು ಗುರುತಿಸಿದ್ದು, ₹ 38.65 ಕೋಟಿಗೆ ಅನುಮೋದನೆ ನೀಡಲಾಗಿದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸಂದಾಯ ಆಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಾಲ್ಕು ವರ್ಷದಿಂದ ಪ್ರವಾಹ, ಭೂಕುಸಿತ ಎದುರಿಸುತ್ತಿದ್ದೇವೆ. ಎನ್ಡಿಆರ್ಎಫ್ (ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ) ಪರಿಹಾರ ಮಾರ್ಗಸೂಚಿ ಬದಲಿಸಿ ರಾಜ್ಯಕ್ಕೆ ಹೆಚ್ಚುವರಿ ಪರಿಹಾರ ನೀಡಲು ಶಿಫಾರಸು ಮಾಡಬೇಕು’ ಎಂದು ಪ್ರವಾಹ ಅಧ್ಯಯನಕ್ಕೆ ಬಂದ ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.</p>.<p>ಮುಖ್ಯಮಂತ್ರಿ ಅವರನ್ನು ಕೇಂದ್ರ ಗೃಹ ಸಚಿವಾಲಯದ ಸುಶೀಲ್ ಪಾಲ್ ನೇತೃತ್ವದ ತಂಡ ಶನಿವಾರ ಭೇಟಿ ಮಾಡಿ ರಾಜ್ಯದಲ್ಲಿ ಅತಿವೃಷ್ಟಿ ಯಿಂದ ಉಂಟಾಗಿರುವ ಹಾನಿ ಕುರಿತು ಚರ್ಚೆ ನಡೆಸಿತು.</p>.<p>‘ಪ್ರವಾಹ ಸಂತಸ್ತರಿಗೆ ರಕ್ಷಣೆ ಮತ್ತು ತುರ್ತು ಪರಿಹಾರವನ್ನು ಸರ್ಕಾರ ನೀಡಿದೆ. ಆದರೆ, ಜನರ ಪುನರ್ವಸತಿಗೆ ಹೆಚ್ಚಿನ ನೆರವಿನ ಅಗತ್ಯವಿದೆ. ಉತ್ತರ ಕನ್ನಡ ಜಿಲ್ಲೆಯ ಹಾನಿ ಪರಿಶೀಲಿಸಿ ₹ 100 ಕೋಟಿ ತಕ್ಷಣ ಬಿಡುಗಡೆ ಮಾಡಿದ್ದು, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ₹ 500 ಕೋಟಿ ಒದಗಿಸಲಾಗಿದೆ’ ಎಂದು ಬೊಮ್ಮಾಯಿ ಹೇಳಿದರು.</p>.<p>‘ವಾಸ್ತವಾಂಶಗಳನ್ನು ಕೇಂದ್ರ ತಂಡದ ಮುಂದಿಡಲಾಗಿದೆ. ಈಗ ಕ್ಷಣ ಕ್ಷಣದ ಮಾಹಿತಿ ಕೇಂದ್ರಕ್ಕೂ ಲಭ್ಯವಿದೆ. ನಾಲ್ಕು ವರ್ಷಗಳಿಂದ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಪ್ರತಿವರ್ಷ ಕುಟುಂಬಗಳ ಸ್ಥಳಾಂತರ, ಮನೆ ಕಳೆದುಕೊಳ್ಳುವ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ’ ಎಂದು ಹೇಳಿದರು.</p>.<p>‘15 ವರ್ಷಗಳಲ್ಲಿ ರಸ್ತೆ, ವಿದ್ಯುತ್ ಮತ್ತಿತರ ಸಾರ್ವಜನಿಕ ಸೌಲಭ್ಯಗಳಿಗೆ ಭಾರಿ ಹೂಡಿಕೆ ಮಾಡಲಾಗಿದೆ. ಅವುಗಳನ್ನು ಮರು ಸ್ಥಾಪಿಸುವುದು ಸವಾಲಿನ ಕೆಲಸ. ಪ್ರವಾಹದಿಂದ ಬೆಳೆ ನಷ್ಟವಾಗಿ ರೈತರು ತೊಂದರೆ ಅನುಭವಿಸಿದ್ದಾರೆ. ಆದ್ದರಿಂದ, ರಾಜ್ಯಕ್ಕೆ ಗರಿಷ್ಠ ಪ್ರಮಾಣದ ನೆರವು ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಸುಶೀಲ್ ಪಾಲ್ ಮಾತನಾಡಿ, ‘ರಾಜ್ಯ ಸರ್ಕಾರ ವಸ್ತುನಿಷ್ಠ ವರದಿ ಸಲ್ಲಿಸಿದೆ’ ಎಂದರು.</p>.<p><strong>‘ತುರ್ತು ಬೆಳೆ ಪರಿಹಾರ ₹ 38.65 ಕೋಟಿ’</strong><br />‘ರಾಜ್ಯದ 15 ಜಿಲ್ಲೆಗಳ 86 ತಾಲ್ಲೂಕುಗಳನ್ನು ಪ್ರವಾಹಪೀಡಿತ ಎಂದು ಘೋಷಿಸಿದ್ದು, ₹ 5,690 ಕೋಟಿ ನಷ್ಟ ಅಂದಾಜಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಸುಮಾರು ₹ 765.84 ಕೋಟಿ ನಷ್ಟ ಆಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.</p>.<p>ವಿಪತ್ತು ಪರಿಹಾರ ಘಟಕದ ಅಧಿಕಾರಿಗಳ ಜೊತೆ ಶನಿವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬೆಳೆ ಪರಿಹಾರ ನೀಡಲು 13 ಜಿಲ್ಲೆಗಳ 45,586 ಫಲಾನುಭವಿಗಳನ್ನು ಗುರುತಿಸಿದ್ದು, ₹ 38.65 ಕೋಟಿಗೆ ಅನುಮೋದನೆ ನೀಡಲಾಗಿದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸಂದಾಯ ಆಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>