ಆ್ಯಸಿಡ್ ದಾಳಿ ಸಂತ್ರಸ್ತರಿಗೆ ನೀಡುತ್ತಿದ್ದ ಮಾಸಿಕ ಪಿಂಚಣಿ ಮೊತ್ತವನ್ನು ₹3,000ದಿಂದ ₹10,000ಕ್ಕೆ ಹೆಚ್ಷಿಸಲಾಗಿದೆ. ಸಮಾರಂಭದಲ್ಲಿ ಕೆಲವು ಸಂತ್ರಸ್ತರಿಗೆ ಮುಖ್ಯಮಂತ್ರಿ ಪಿಂಚಣಿ ಆದೇಶ ವಿತರಿಸಿದರು. ಆಗ ಸಂತ್ರಸ್ತೆಯರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಯವರ ಬಳಿ ಹೇಳಿಕೊಂಡರು. ಬಳಿಕ ಸಮಾರಂಭ ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ, ಆ್ಯಸಿಡ್ ದಾಳಿಯ ಸಂತ್ರಸ್ತರಿಗೆ ನಿವೇಶನ, ಮನೆ ಮತ್ತು ಸ್ವಯಂ ಉದ್ಯೋಗಕ್ಕೆ ನೆರವು ನೀಡುವ ಘೋಷಣೆ ಮಾಡಿದರು.