ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾತ್ರಿ ಕರ್ಫ್ಯೂ ವಾಪಸ್‌ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

Last Updated 27 ಡಿಸೆಂಬರ್ 2021, 15:56 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರವನ್ನು ಹಿಂಪಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಆರೋಗ್ಯದ ದೃಷ್ಟಿಯಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಬೇರೆ ಯಾವುದೇ ಉದ್ದೇಶವಿಲ್ಲ’ ಎಂದರು.

ವ್ಯಾಪಾರ, ವಹಿವಾಟು ನಡೆಯಬೇಕೆಂಬುದು ಸರ್ಕಾರದ ಭಾವನೆ ಕೂಡ. ಈಗಾಗಲೇ ಆರ್ಥಿಕತೆ ಚೇತರಿಕೆಯಾಗಿದೆ. ಅದು ಮುಂದುವರಿದುಕೊಂಡು ಹೋಗಬೇಕಿದೆ ಎಂದು ಹೇಳಿದರು.

ಪಕ್ಷದ ಆಂತರಿಕ ಚರ್ಚೆ: ಮಂಗಳವಾರ ಮತ್ತು ಬುಧವಾರ ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ದದ ಆಂತರಿಕ ವಿಚಾರಗಳ ಕುರಿತು ಅಲ್ಲಿ ಚರ್ಚೆ ನಡೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪಕ್ಷ ಮತ್ತು ಸರ್ಕಾರದ ನಡುವೆ ಉತ್ತಮ ಬಾಂಧವ್ಯವಿದೆ. ಮುಂದಿನ ದಿನಗಳಲ್ಲಿ ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಸರ್ಕಾರ ಕೆಲಸ ಮಾಡಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT