<p><strong>ಬೆಂಗಳೂರು:</strong>‘ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವುದಿಲ್ಲ. ಯಾರು ಏನೇ ಹೇಳಿಕೊಳ್ಳಲಿ’ ಎಂದರು.</p>.<p>‘ಕೆಲವು ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿಫೋಟೊ, ವಿಡಿಯೊ ಮಾಡದಂತೆ ಬಹಳ ದಿನಗಳಿಂದ ಹೇಳುತ್ತಿದ್ದರು. ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳಫೋಟೊ ತೆಗೆದು ತೊಂದರೆ ಆಗಿತ್ತು’ ಎಂದೂ ಮುಖ್ಯಮಂತ್ರಿ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/karnataka-government-withdrwan-the-photo-video-prohibition-order-in-government-offices-954883.html" itemprop="url" target="_blank">ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಚಿತ್ರೀಕರಣ ನಿಷೇಧ ಆದೇಶ ವಾಪಸ್ </a></p>.<p><strong>28ರಂದು ದೊಡ್ಡಬಳ್ಳಾಪುರದಲ್ಲಿ ರ್ಯಾಲಿ:</strong>‘ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇದೇ 28ರಂದು ಪಕ್ಷದ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ವಿಶೇಷ ರ್ಯಾಲಿ ಆಯೋಜಿಸಲು ನಿರ್ಧರಿಸಿದ್ದೇವೆ. ಸರ್ಕಾರದ ಕಾರ್ಯಕ್ರಮ ಬೆಂಗಳೂರಿನಲ್ಲಿ, ಪಕ್ಷದ ಕಾರ್ಯಕ್ರಮ, ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ’ ಎಂದರು.</p>.<p>‘ನಮ್ಮ ಸಚಿವ ಸಂಪುಟದಎಲ್ಲ ಸಚಿವರು ಚಿಂತನಾ ಸಭೆ ಮಾಡಿದ್ದೇವೆ. ಈ ಸಭೆಯಲ್ಲಿ ಯಾವ ರೀತಿ ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಪಕ್ಷ ಸಮನ್ವಯವಾಗಿ ಮುಂದೆ ಹೋಗಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡಿರುವ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಲು ಅಭಿಯಾನ ಕೈಗೊಳ್ಳಲು ತೀರ್ಮಾನಿಸಿದ್ದೇವೆ’ ಎಂದರು.</p>.<p>‘ಅಲ್ಲದೆ, ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೂ ಮಾತನಾಡಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ಕೊಟ್ಟಿದ್ದೇನೆ. ಆಶ್ರಯ ಕೇಂದ್ರಗಳನ್ನು ಕೂಡಲೇ ತೆರೆಯಲು, ಬೆಳೆ ನಾಶದ ಸಮೀಕ್ಷೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ. ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವುದಿಲ್ಲ. ಯಾರು ಏನೇ ಹೇಳಿಕೊಳ್ಳಲಿ’ ಎಂದರು.</p>.<p>‘ಕೆಲವು ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿಫೋಟೊ, ವಿಡಿಯೊ ಮಾಡದಂತೆ ಬಹಳ ದಿನಗಳಿಂದ ಹೇಳುತ್ತಿದ್ದರು. ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳಫೋಟೊ ತೆಗೆದು ತೊಂದರೆ ಆಗಿತ್ತು’ ಎಂದೂ ಮುಖ್ಯಮಂತ್ರಿ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/karnataka-government-withdrwan-the-photo-video-prohibition-order-in-government-offices-954883.html" itemprop="url" target="_blank">ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಚಿತ್ರೀಕರಣ ನಿಷೇಧ ಆದೇಶ ವಾಪಸ್ </a></p>.<p><strong>28ರಂದು ದೊಡ್ಡಬಳ್ಳಾಪುರದಲ್ಲಿ ರ್ಯಾಲಿ:</strong>‘ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇದೇ 28ರಂದು ಪಕ್ಷದ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ವಿಶೇಷ ರ್ಯಾಲಿ ಆಯೋಜಿಸಲು ನಿರ್ಧರಿಸಿದ್ದೇವೆ. ಸರ್ಕಾರದ ಕಾರ್ಯಕ್ರಮ ಬೆಂಗಳೂರಿನಲ್ಲಿ, ಪಕ್ಷದ ಕಾರ್ಯಕ್ರಮ, ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ’ ಎಂದರು.</p>.<p>‘ನಮ್ಮ ಸಚಿವ ಸಂಪುಟದಎಲ್ಲ ಸಚಿವರು ಚಿಂತನಾ ಸಭೆ ಮಾಡಿದ್ದೇವೆ. ಈ ಸಭೆಯಲ್ಲಿ ಯಾವ ರೀತಿ ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಪಕ್ಷ ಸಮನ್ವಯವಾಗಿ ಮುಂದೆ ಹೋಗಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡಿರುವ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಲು ಅಭಿಯಾನ ಕೈಗೊಳ್ಳಲು ತೀರ್ಮಾನಿಸಿದ್ದೇವೆ’ ಎಂದರು.</p>.<p>‘ಅಲ್ಲದೆ, ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೂ ಮಾತನಾಡಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ಕೊಟ್ಟಿದ್ದೇನೆ. ಆಶ್ರಯ ಕೇಂದ್ರಗಳನ್ನು ಕೂಡಲೇ ತೆರೆಯಲು, ಬೆಳೆ ನಾಶದ ಸಮೀಕ್ಷೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ‘ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>