<p><strong>ಬೆಂಗಳೂರು:</strong> ‘ರಾಜ್ಯದ ಗಡಿ ಪ್ರದೇಶದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಗಡಿ ಬಗ್ಗೆ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>‘ಕರ್ನಾಟಕದ ಗಡಿ ಭಾಗಗಳ ಮರಾಠಿ ಭಾಷಿಗರು ಇರುವ ಸ್ಥಳಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಹೋರಾಟಕ್ಕೆ ನಮ್ಮ ಬೆಂಬಲ ಮುಂದುವರಿಯಲಿದೆ’ ಎಂಬ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆಗೆ ಬೊಮ್ಮಾಯಿ ಪ್ರತಿಕ್ರಿಯಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಬೊಮ್ಮಾಯಿ, ‘ಮಹಾರಾಷ್ಟ್ರದಲ್ಲಿನ ರಾಜಕಾರಣಿಗಳು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಅದಕ್ಕಾಗಿ ರಾಜ್ಯದ ಗಡಿ ಭಾಷೆಗಳ ಬಗ್ಗೆ ಕೆದಕುತ್ತಿದ್ದಾರೆ’ ಎಂದರು.</p>.<p>‘ಮಹಾರಾಷ್ಟ್ರದವರು ಅವರ ರಾಜಕೀಯ ಉಳಿವಿಗಾಗಿ ರಾಜ್ಯದ ಗಡಿ ಭಾಷೆ ವಿಚಾರಗಳನ್ನು ಎತ್ತುವುದು ಸಣ್ಣತನ. ಮಹಾರಾಷ್ಟ್ರದ ಎಲ್ಲ ರಾಜಕಾರಣಿಗಳು ಈ ರೀತಿಯ ವರ್ತನೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದ ಮುಖ್ಯಮಂತ್ರಿ, ‘ಮಹಾರಾಷ್ಟ್ರದಲ್ಲಿ ಕನ್ನಡ ಭಾಷೆ ಮಾತನಾಡುವ ಜನರಿರುವ ಹಲವು ಪ್ರದೇಶಗಳಿವೆ. ಈ ಬಗ್ಗೆಯೂ ಕ್ರಮ ತೆಗೆದುಕೊಳ್ಳುವ ಚಿಂತನೆ ಸರ್ಕಾರ ಮಾಡುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದ ಗಡಿ ಪ್ರದೇಶದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಗಡಿ ಬಗ್ಗೆ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>‘ಕರ್ನಾಟಕದ ಗಡಿ ಭಾಗಗಳ ಮರಾಠಿ ಭಾಷಿಗರು ಇರುವ ಸ್ಥಳಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಹೋರಾಟಕ್ಕೆ ನಮ್ಮ ಬೆಂಬಲ ಮುಂದುವರಿಯಲಿದೆ’ ಎಂಬ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆಗೆ ಬೊಮ್ಮಾಯಿ ಪ್ರತಿಕ್ರಿಯಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಬೊಮ್ಮಾಯಿ, ‘ಮಹಾರಾಷ್ಟ್ರದಲ್ಲಿನ ರಾಜಕಾರಣಿಗಳು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಅದಕ್ಕಾಗಿ ರಾಜ್ಯದ ಗಡಿ ಭಾಷೆಗಳ ಬಗ್ಗೆ ಕೆದಕುತ್ತಿದ್ದಾರೆ’ ಎಂದರು.</p>.<p>‘ಮಹಾರಾಷ್ಟ್ರದವರು ಅವರ ರಾಜಕೀಯ ಉಳಿವಿಗಾಗಿ ರಾಜ್ಯದ ಗಡಿ ಭಾಷೆ ವಿಚಾರಗಳನ್ನು ಎತ್ತುವುದು ಸಣ್ಣತನ. ಮಹಾರಾಷ್ಟ್ರದ ಎಲ್ಲ ರಾಜಕಾರಣಿಗಳು ಈ ರೀತಿಯ ವರ್ತನೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದ ಮುಖ್ಯಮಂತ್ರಿ, ‘ಮಹಾರಾಷ್ಟ್ರದಲ್ಲಿ ಕನ್ನಡ ಭಾಷೆ ಮಾತನಾಡುವ ಜನರಿರುವ ಹಲವು ಪ್ರದೇಶಗಳಿವೆ. ಈ ಬಗ್ಗೆಯೂ ಕ್ರಮ ತೆಗೆದುಕೊಳ್ಳುವ ಚಿಂತನೆ ಸರ್ಕಾರ ಮಾಡುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>