‘ಮಹಾರಾಷ್ಟ್ರದವರು ಅವರ ರಾಜಕೀಯ ಉಳಿವಿಗಾಗಿ ರಾಜ್ಯದ ಗಡಿ ಭಾಷೆ ವಿಚಾರಗಳನ್ನು ಎತ್ತುವುದು ಸಣ್ಣತನ. ಮಹಾರಾಷ್ಟ್ರದ ಎಲ್ಲ ರಾಜಕಾರಣಿಗಳು ಈ ರೀತಿಯ ವರ್ತನೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದ ಮುಖ್ಯಮಂತ್ರಿ, ‘ಮಹಾರಾಷ್ಟ್ರದಲ್ಲಿ ಕನ್ನಡ ಭಾಷೆ ಮಾತನಾಡುವ ಜನರಿರುವ ಹಲವು ಪ್ರದೇಶಗಳಿವೆ. ಈ ಬಗ್ಗೆಯೂ ಕ್ರಮ ತೆಗೆದುಕೊಳ್ಳುವ ಚಿಂತನೆ ಸರ್ಕಾರ ಮಾಡುತ್ತಿದೆ’ ಎಂದರು.