‘ನಮಗೆ ರಾಜಕೀಯ, ಸ್ವಾತಂತ್ರ್ಯ ದೊರಕಿದೆ. ಆದರೆ, ಶೈಕ್ಷಣಿಕ ಹಾಗೂ ಆರ್ಥಿಕ ಸ್ವತಂತ್ರ ದೊರಕುವವರೆಗೂ ನ್ಯಾಯ ಸಿಗುವುದಿಲ್ಲ. ಶಿಕ್ಷಣ, ಉದ್ಯೋಗ ಹಾಗೂ ಸಬಲೀಕರಣದ ಸಾಧನೆಯನ್ನು ಸಮಾಜ ಸರ್ಕಾರ ಎರಡೂ ಮಾಡಬೇಕಿದೆ. ಈ ದಿಕ್ಕಿನಲ್ಲಿ ದಾಪುಗಾಲಿನ ಹೆಜ್ಜೆಗಳನ್ನಿಡಬೇಕಿದೆ. ಈ ಕೆಲಸ ಕೇವಲ ಮಾತಿನಿಂದಲ್ಲ, ಕೃತಿಯಲ್ಲಿ ಆಗಬೇಕು. ಇಂದಿನ ಅಗತ್ಯಗಳಿಗೆ ತಕ್ಕಂತೆ ಯುವಕರನ್ನು ಸಿದ್ಧಗೊಳಿಸಬೇಕು. ಹೊಸ ಯೋಜನೆಗಳನ್ನು ಜಾರಿಗೆ ತಂದು ಈ ಸಮುದಾಯದ ಮಕ್ಕಳು ವಿಶ್ವಮಟ್ಟದಲ್ಲಿ ಎಲ್ಲರೊಂದಿಗೆ ಪೈಪೋಟಿ ಮಾಡಲು ಸಿದ್ಧಗೊಳಿಸಿ, ಆರ್ಥಿಕತೆ, ಕೌಶಲ, ಉದ್ಯೋಗಾವಕಾಶಗಳನ್ನು ಸೃಜಿಸಲಾಗುವುದು’ ಎಂದರು.