ಬೆಂಗಳೂರು: ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದಲ್ಲಿ ಭಾಗ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 22ರ ಭಾನುವಾರ ಬೆಳಿಗ್ಗೆ ಪ್ರಯಾಣ ಬೆಳೆಸಲಿದ್ದಾರೆ.
ಇದೇ 23 ಮತ್ತು 24 ರಂದು ಆರ್ಥಿಕ ಸಮಾವೇಶ ನಡೆಯಲಿದ್ದು, ಬೊಮ್ಮಾಯಿ ಅದರಲ್ಲಿ ಪಾಲ್ಗೊಳ್ಳಲಿ ದ್ದಾರೆ.ಇದೇ 26 ರಂದು ವಾಪಸ್ ಆಗಲಿದ್ದಾರೆ.
ರಾಜ್ಯದಲ್ಲಿ ವಿವಿಧ ರೀತಿಯ ಕೈಗಾರಿಕೆಗಳ ಹೂಡಿಕೆಗಳಿಗೆ ಇರುವ ವಿಪುಲ ಅವಕಾಶಗಳ ಬಗ್ಗೆ ವಿಶ್ವದ ಹೂಡಿಕೆದಾರರಿಗೆ ಮನವರಿಕೆ ಮಾಡಿ ರಾಜ್ಯಕ್ಕೆ ಹೂಡಿಕೆದಾರರನ್ನು ಸೆಳೆಯಲು ಮುಖ್ಯಮಂತ್ರಿ ಮತ್ತು ಅವರ ತಂಡ ಪ್ರಯತ್ನಿಸಬೇಕಾಗಿದೆ.