ಸಂಸತ್ ಭವನದಲ್ಲಿ ಮಧ್ಯಾಹ್ನ ಅಮಿತ್ ಶಾ ಅವರನ್ನು ಭೇಟಿಯಾದ ಬೊಮ್ಮಾಯಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ಸಂಪುಟ ವಿಸ್ತರಣೆ ಹಾಗೂ ನಿಗಮ– ಮಂಡಳಿಗಳ ನೇಮಕಕ್ಕೆ ಒತ್ತಡ ಹೆಚ್ಚಿದ್ದು ಕೂಡಲೇ ಅನುಮತಿ ನೀಡಬೇಕು ಎಂದು ಕೋರಿದ್ದಾರೆ. ಆದರೆ, ನಡ್ಡಾ ಅವರೊಂದಿಗೆ ಚರ್ಚಿಸಿಯೇ ನಿರ್ಧಾರ ಕೈಗೊಳ್ಳಬೇಕು ಎಂದು ಸೂಚಿಸಿದ್ದಾಗಿ ಮೂಲಗಳು ಹೇಳಿವೆ.