ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ವರದಿ ನೀಡಿದ್ದ ಆಯೋಗದ ಮುಖ್ಯಸ್ಥರಾಗಿದ್ದ ನಾಗಮೋಹನ್ ದಾಸ್ ಅವರೊಂದಿಗೆ ಮುಖ್ಯಮಂತ್ರಿಯವರು ಶುಕ್ರವಾರ ಚರ್ಚೆ ನಡೆಸಿ, ಸಲಹೆ ಪಡೆದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.