ತೀರ್ಥಹಳ್ಳಿ ಕ್ಷೇತ್ರದ ಶಾಸಕರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಮಂಡಗದ್ದೆ ಪಕ್ಷಿಧಾಮವನ್ನು ಪ್ರವಾಸೋದ್ಯಮದ ಹಿತದೃಷ್ಟಿಯಿಂದ ಅಧಿಕೃತ ಪಕ್ಷಿಧಾಮ ಎಂದು ಘೋಷಿಸುವಂತೆ ಕೋರಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದರು. ಗೃಹ ಸಚಿವರ ಕೋರಿಕೆಯಂತೆ ಅಧಿಕೃತ ಪಕ್ಷಿಧಾಮ ಎಂದು ಘೋಷಿಸಿ ಅಧಿಸೂಚನೆ ಹೊರಡಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು.