ಉಮೇಶ ಕತ್ತಿ, ಮುರುಗೇಶ ನಿರಾಣಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಸಿ.ಪಿ.ಯೋಗೇಶ್ವರ್, ಎಸ್.ಅಂಗಾರ ಅವರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಜಾತಿವಾರು, ಪ್ರಾದೇಶಿಕ ಸಮತೋಲನ ಕಾಪಾಡುವ ಮತ್ತು ಉತ್ಸಾಹಿ ಯುವ ಶಾಸಕರಿಗೆ ಈ ವಿಸ್ತರಣೆಯಲ್ಲಿ ಮನ್ನಣೆ ನೀಡಿಲ್ಲ ಎಂಬ ವ್ಯಾಖ್ಯಾನ ಬಿಜೆಪಿ ವಲಯದಲ್ಲಿ ಕೇಳಿ ಬಂದಿದೆ.