<p><strong>ಬೆಳಗಾವಿ</strong>: 'ಮುಖ್ಯಮಂತ್ರಿ ಬದಲಾವಣೆ ಸಾಧ್ಯವೇ ಇಲ್ಲ. ಮುಂದಿನ ಎರಡು ವರ್ಷ ಅವರೇ ಮುಂದುವರಿಯುತ್ತಾರೆ' ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.</p>.<p>ಗೋಕಾಕದಲ್ಲಿ ಗುರುವಾರ ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ' ಎಂದೂ ತಿಳಿಸಿದರು.</p>.<p>'ನಾವು ಯಡಿಯೂರಪ್ಪ ಹಾಗೂ ಅಮಿತ್ ಶಾ ನಂಬಿ ಬಿಜೆಪಿಗೆ ಬಂದಿದ್ದೇವೆ' ಎಂದರು.</p>.<p>ಕೆಲವು ಶಾಸಕರು ಯಡಿಯೂರಪ್ಪ ವಿರುದ್ಧ ಅಪಸ್ವರ ತಗೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಬಿಜೆಪಿಯಲ್ಲಿರುವ ಎಲ್ಲ ಶಾಸಕರೂ ಕುಟುಂಬ ಇದ್ದಂತೆ. ಯಡಿಯೂರಪ್ಪ ಅವರು ಎಲ್ಲರನ್ನೂ ಕರೆದು ಮಾತನಾಡಬೇಕು ಎಂದು ಮನವಿ ಮಾಡುತ್ತೇನೆ' ಎಂದರು.</p>.<p>'ವಿರೋಧ ಪಕ್ಷದವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿ ಏನೇನೋ ಹೇಳುತ್ತಿರುತ್ತಾರೆ' ಎಂದು ಟೀಕಿಸಿದರು.</p>.<p>'ಈ ತಿಂಗಳ 18ರ ನಂತರ ಯಡಿಯೂರಪ್ಪ ಅವರು ಹೊಸ ಯಡಿಯೂರಪ್ಪ ಆಗಿ ರಾಜ್ಯದ ಮೂಲೆ ಮೂಲೆಗೆ ಪ್ರವಾಸ ಮಾಡುತ್ತಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>'ಸಿ.ಪಿ. ಯೋಗೇಶ್ವರ ಈಗಲೂ ನನ್ನ ಸ್ನೇಹಿತ. ಅವರಿಗೆ ಏನಾದರೂ ತಪ್ಪು ಗ್ರಹಿಕೆ ಇದ್ದರೆ ಯಡಿಯೂರಪ್ಪ ಮುಂದೆ ಕುಳಿತು ಮಾತನಾಡಿ ಸರಿಪಡಿಸಿಕೊಳ್ಳಬೇಕು ಎಂದು ಕೋರುತ್ತೇನೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: 'ಮುಖ್ಯಮಂತ್ರಿ ಬದಲಾವಣೆ ಸಾಧ್ಯವೇ ಇಲ್ಲ. ಮುಂದಿನ ಎರಡು ವರ್ಷ ಅವರೇ ಮುಂದುವರಿಯುತ್ತಾರೆ' ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.</p>.<p>ಗೋಕಾಕದಲ್ಲಿ ಗುರುವಾರ ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ' ಎಂದೂ ತಿಳಿಸಿದರು.</p>.<p>'ನಾವು ಯಡಿಯೂರಪ್ಪ ಹಾಗೂ ಅಮಿತ್ ಶಾ ನಂಬಿ ಬಿಜೆಪಿಗೆ ಬಂದಿದ್ದೇವೆ' ಎಂದರು.</p>.<p>ಕೆಲವು ಶಾಸಕರು ಯಡಿಯೂರಪ್ಪ ವಿರುದ್ಧ ಅಪಸ್ವರ ತಗೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಬಿಜೆಪಿಯಲ್ಲಿರುವ ಎಲ್ಲ ಶಾಸಕರೂ ಕುಟುಂಬ ಇದ್ದಂತೆ. ಯಡಿಯೂರಪ್ಪ ಅವರು ಎಲ್ಲರನ್ನೂ ಕರೆದು ಮಾತನಾಡಬೇಕು ಎಂದು ಮನವಿ ಮಾಡುತ್ತೇನೆ' ಎಂದರು.</p>.<p>'ವಿರೋಧ ಪಕ್ಷದವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿ ಏನೇನೋ ಹೇಳುತ್ತಿರುತ್ತಾರೆ' ಎಂದು ಟೀಕಿಸಿದರು.</p>.<p>'ಈ ತಿಂಗಳ 18ರ ನಂತರ ಯಡಿಯೂರಪ್ಪ ಅವರು ಹೊಸ ಯಡಿಯೂರಪ್ಪ ಆಗಿ ರಾಜ್ಯದ ಮೂಲೆ ಮೂಲೆಗೆ ಪ್ರವಾಸ ಮಾಡುತ್ತಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>'ಸಿ.ಪಿ. ಯೋಗೇಶ್ವರ ಈಗಲೂ ನನ್ನ ಸ್ನೇಹಿತ. ಅವರಿಗೆ ಏನಾದರೂ ತಪ್ಪು ಗ್ರಹಿಕೆ ಇದ್ದರೆ ಯಡಿಯೂರಪ್ಪ ಮುಂದೆ ಕುಳಿತು ಮಾತನಾಡಿ ಸರಿಪಡಿಸಿಕೊಳ್ಳಬೇಕು ಎಂದು ಕೋರುತ್ತೇನೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>