ನವದೆಹಲಿ: ‘ಸಂಪುಟ ಪುನಾರಚನೆ ಮಾಡಬೇಕು ಎಂಬ ಅಪೇಕ್ಷೆ ಇದೆ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜತೆ ಚರ್ಚೆ ನಡೆಸಿದ್ದೇನೆ. ಪ್ರಧಾನಿ ಜತೆ ಚರ್ಚಿಸಿ ತಿಳಿಸುವುದಾಗಿ ನಡ್ಡಾ ತಿಳಿಸಿದ್ದಾರೆ. ಅವರು ಹೇಗೆ ಸೂಚನೆ ಕೊಡುತ್ತಾರೆ ಹಾಗೆ ನಡೆದುಕೊಳ್ಳುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ದೆಹಲಿಯಲ್ಲಿ ನಡ್ಡಾ ಅವರನ್ನು ಶುಕ್ರವಾರ ಸಂಜೆ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ‘ಅಧಿವೇಶನಕ್ಕೆ ಮುನ್ನವೇ ಪುನಾರಚನೆ ಮಾಡಬೇಕು ಎಂಬ ಅಪೇಕ್ಷೆ ಇದೆ. ಚರ್ಚೆ ಮಾಡಲಿರುವ ವರಿಷ್ಠರು ಶನಿವಾರ ನಿರ್ದೇಶನ ನೀಡುವ ಸಾಧ್ಯತೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.