ಕಂದಾಯ ಸಚಿವ ಆರ್.ಅಶೋಕ ಮಾನತಾಡಿ, 'ಮೂರನೇ ಅಲೆಯಲ್ಲಿ ಮಕ್ಕಳ ಆರೋಗ್ಯ ತಾಪಸಣೆಗೆ ವಿವಿಧ ವಿಭಾಗದ ವೈದ್ಯರಿಗೆ ತರಬೇತಿ ನೀಡಲು ಬೆಂಗಳೂರಿನ ನಿಮಾನ್ಸ್ ನಲ್ಲಿ ತರಬೇತಿ ಕೇಂದ್ರವನ್ನು ಆರಂಭಿಸಲಾಗಿದೆ. ಲೆನೆವೊ, ಗೋಲ್ಡ್ ಮ್ಯಾನ್ ಸ್ಯಾಚಸ್, ಕಂಪನಿಗಳು ತಮ್ಮ ಸಿ.ಎಸ್.ಆರ್ ನಿಧಿಯಡಿ ಒದಗಿಸಿರುವ ಅನುದಾನದಲ್ಲಿ ಮಾಡ್ಯುಲಸ್ ಸಂಸ್ಥೆಯವರು ಸಿದ್ಧಪಡಿಸಿರುವ ವಿನ್ಯಾಸದಂತೆ ಅಂದಾಜು ₹4 ಕೋಟಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣಗೊಂಡಿದೆ. ಈ ಆಸ್ಪತ್ರೆಯ ಲೇಔಟ್ ನಿರ್ಮಾಣ ಕಾಮಗಾರಿಯನ್ನು ದೊಡ್ಡಬಳ್ಳಾಪುರದ ಇಂಡೋ ಎಂಐಎಂ ಪ್ರೈವೇಟ್ ಲಿಮಿಟೆಡ್ ನಿರ್ವಹಿಸಿದೆ' ಎಂದರು.