ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ ಬಗ್ಗೆ ತೀರ್ಮಾನ: ಮುಖ್ಯಮಂತ್ರಿ ಯಡಿಯೂರಪ್ಪ

Last Updated 7 ಏಪ್ರಿಲ್ 2021, 5:48 IST
ಅಕ್ಷರ ಗಾತ್ರ

ಬೆಳಗಾವಿ: ಪರಿಪರಿಯಾಗಿ ಮನವಿ ಮಾಡಿದರೂ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದೆ. ಹೀಗಾಗಿ, ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ ಬಗ್ಗೆ ಚಿಂತಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನೌಕರರು ಮುಷ್ಕರ ನಿಲ್ಲಿಸಿ ಮಾತುಕತೆಗೆ ಬರಬೇಕು. ನಾನು ಯಾರ ಜೊತೆಗೆ ಬೇಕಾದರೂ ಮಾತನಾಡಲು ಸಿದ್ಧವಿದ್ದೇನೆ. ನೌಕರರು ಹಟ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಆ ನೌಕರರ 9 ಬೇಡಿಕೆಗಳ ಪೈಕಿ ಎಂಟನ್ನು ಈಡೇರಿಸಿದ್ದೇವೆ. ದುರುದ್ದೇಶದಿಂದ ಹಟ ಮಾಡುವುದು ಸರಿಯಲ್ಲ ಎಂದರು.

ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಖಾಸಗಿಯವರು ಹೆಚ್ಚಿಗೆ ಹಣ ಪಡೆದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜನರ ಸುಲಿಗೆ ಮಾಡಬೇಡಿ ಎಂದು ಅವರಲ್ಲೂ ಮನವಿ ಮಾಡುತ್ತೇನೆ ಎಂದು ತಿಳಿಸಿದರು. ಮುಷ್ಕರವನ್ನು ಸ್ವಾರ್ಥಕ್ಕಾಗಿ ಮಾಡುತ್ತಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT