‘ಕೆಲವು ಜಿಲ್ಲೆಗಳಲ್ಲಿ ಇನ್ನೂ ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆದಿಲ್ಲ. ಅಂಥ ಜಿಲ್ಲೆಗಳಲ್ಲಿ ಆದ್ಯತೆಯ ಮೇರೆಗೆ ತೆರೆಯುಬೇಕು. ಎಲ್ಲ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರದಲ್ಲಿ ಸೆಂಟರ್ಗಳನ್ನು ತೆರೆಯಬೇಕು. ಈ ಉದ್ದೇಶಕ್ಕೆ ವಸತಿ ಶಾಲೆಗಳು, ಹಾಸ್ಟೆಲ್ಗಳನ್ನು ಬಳಸಿಕೊಳ್ಳಬಹುದು. ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕುಮಟ್ಟದಲ್ಲಿ ಕಾರ್ಯಪಡೆ ರಚಿಸಿ, ರೋಗಿಗಳ ಮೇಲೆ ಕಾಳಜಿ ವಹಿಸಬೇಕು' ಎಂದೂ ಮುಖ್ಯಮಂತ್ರಿ ನಿರ್ದೇಶನ ನೀಡಿದರು.