<p><strong>ಬೆಂಗಳೂರು:</strong> ಸೈಬರ್ ಮತ್ತು ಆರ್ಥಿಕ ಅಪರಾಧಗಳನ್ನು ಬೇಧಿಸಲು ಪೊಲೀಸರಿಗೆ ಹೆಚ್ಚಿನ ತರಬೇತಿ, ಆಧುನಿಕ ತಂತ್ರಜ್ಞಾನಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ರಾಜಭವನದ ಗಾಜಿನಮನೆಯಲ್ಲಿ ಗುರುವಾರ ಪೊಲೀಸ್ ಇಲಾಖೆ ಆಯೋಜಿಸಿದ್ದ ಪೊಲೀಸ್ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ಪೊಲೀಸ್ ಪಡೆಗೆ ಹೆಚ್ಚಿನ ಶಕ್ತಿ ತುಂಬಲಾಗುವುದು ಎಂದು ಹೇಳಿದರು.</p>.<p>ಸೈಬರ್ ಅಪರಾಧಗಳ ಸಮರ್ಪಕ ತನಿಖೆಗಾಗಿ ಸುಸಜ್ಜಿತ ಅಪರಾಧಗಳ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರವನ್ನು ಬೆಂಗಳೂರಿನ ಸಿಐಡಿ ಮುಖ್ಯ ಕಚೇರಿಯಲ್ಲಿ ಸ್ಥಾಪಿಸಲಾಗಿದೆ. ಇವೆಲ್ಲ ಕಾರ್ಯಕ್ಕೆ ಅತ್ಯಾಧುನಿಕ ತಂತ್ರಜ್ಞಾನದ ನೆರವು ಬೇಕಿದೆ. ಅದನ್ನು ಒದಗಿಸಲಾಗುವುದು ಎಂದರು.</p>.<p>ರಾಷ್ಟ್ರದಲ್ಲಿಯೇ ಅತ್ಯುತ್ತಮ ಪೊಲೀಸ್ ಪಡೆ ಎನ್ನುವ ಹೆಗ್ಗಳಿಕೆಯನ್ನು ಕರ್ನಾಟಕ ರಾಜ್ಯ ಪೊಲೀಸ್ ಪಡೆ ಪಡೆದಿದೆ. ಅತಿ ಸೂಕ್ಷ್ಮ ಪ್ರಕರಣಗಳನ್ನು ವಿಚಾರಣೆಗೆ ಗುರಿಪಡಿಸಿದ ನಮ್ಮ ಪೊಲೀಸ್ ಪಡೆಯ ಕ್ಷಮತೆ ಅದ್ವಿತೀಯವಾದುದು ಎಂದು ಶ್ಲಾಘಿಸಿದರು.</p>.<p>ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ಅಪರಾಧಗಳನ್ನು ತಡೆಗಟ್ಟಲು ಹಾಗೂ ಅಪರಾಧಿಗಳನ್ನು ಪತ್ತೆ ಮಾಡಲು ಹಬ್ಬ–ಹರಿದಿನಗಳೆನ್ನದೇ ಸದಾಕಾಲ ದಕ್ಷತೆಯಿಂದ ದಣಿವಿಲ್ಲದೇ ಪೊಲೀಸರು ಶ್ರಮಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.</p>.<p>ಪೊಲೀಸ್ ಪದಕ ಪ್ರದಾನ ಮಾಡಿದ ರಾಜ್ಯಪಾಲ ವಜುಬಾಯಿ ವಾಲಾ ಮಾತನಾಡಿ, ಸಜ್ಜನರಿಗೆ ರಕ್ಷಣೆ ನೀಡಿ, ದುರ್ಜನ ಮನಸ್ಥಿತಿಯನ್ನು ಶಿಕ್ಷಿಸಬೇಕು. ಬದುಕಿರುವಷ್ಟು ದಿನ ಶೌರ್ಯ, ಪೌರುಷ ಮತ್ತು ಗರ್ವದಿಂದ ಬದುಕಬೇಕುಎಂದು ಹೇಳಿದರು.</p>.<p>ರಾಜ್ಯದಲ್ಲಿ ಶಾಂತಿ ಕಾಪಾಡುವುದು ಪೊಲೀಸರ ಜವಾಬ್ದಾರಿಯಾಗಿದ್ದು, ಅವರು ತಮ್ಮ ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ನಿವರ್ಹಿಸುತ್ತಿದ್ದಾರೆ. ಒಬ್ಬ ಸಾಮಾನ್ಯ ವ್ಯಕ್ತಿಯು ಪೊಲೀಸರನ್ನು ನೋಡಿದಾಗ ಸುರಕ್ಷಿತ ಭಾವನೆಯು ಜನರಲ್ಲಿ ಮೂಡಬೇಕು ಎಂದು ತಿಳಿಸಿದರು.</p>.<p>ಪದಕ ಪಡೆದ ಅಧಿಕಾರಿಗಳು ತಮ್ಮ ಸಹೋದ್ಯೋಗಿಗಳು ರಾಜ್ಯದ ಜನರ ಸುರಕ್ಷತೆಯನ್ನು ಕಾಪಾಡಲು ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ವಜುಬಾಯಿ ವಾಲಾ ಸಲಹೆ ನೀಡಿದರು.</p>.<p>ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವ ದಿನಾಚರಣೆಯ (2018–2019 ನೇ ಸಾಲಿನ) ಸಂದರ್ಭದಲ್ಲಿ ವಿಶೇಷ ಸೇವೆ ಸಲ್ಲಿಸಿದ 4 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಮತ್ತು ಪ್ರಶಂಸನೀಯ ಸೇವೆ ಸಲ್ಲಿಸಿದ 74 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪೊಲೀಸ್ ಪದಕ ಪ್ರದಾನ ಮಾಡಿ ಗೌರವಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್, ಡಿಜಿಪಿ ಪ್ರವೀಣ್ ಸೂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸೈಬರ್ ಮತ್ತು ಆರ್ಥಿಕ ಅಪರಾಧಗಳನ್ನು ಬೇಧಿಸಲು ಪೊಲೀಸರಿಗೆ ಹೆಚ್ಚಿನ ತರಬೇತಿ, ಆಧುನಿಕ ತಂತ್ರಜ್ಞಾನಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ರಾಜಭವನದ ಗಾಜಿನಮನೆಯಲ್ಲಿ ಗುರುವಾರ ಪೊಲೀಸ್ ಇಲಾಖೆ ಆಯೋಜಿಸಿದ್ದ ಪೊಲೀಸ್ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ಪೊಲೀಸ್ ಪಡೆಗೆ ಹೆಚ್ಚಿನ ಶಕ್ತಿ ತುಂಬಲಾಗುವುದು ಎಂದು ಹೇಳಿದರು.</p>.<p>ಸೈಬರ್ ಅಪರಾಧಗಳ ಸಮರ್ಪಕ ತನಿಖೆಗಾಗಿ ಸುಸಜ್ಜಿತ ಅಪರಾಧಗಳ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರವನ್ನು ಬೆಂಗಳೂರಿನ ಸಿಐಡಿ ಮುಖ್ಯ ಕಚೇರಿಯಲ್ಲಿ ಸ್ಥಾಪಿಸಲಾಗಿದೆ. ಇವೆಲ್ಲ ಕಾರ್ಯಕ್ಕೆ ಅತ್ಯಾಧುನಿಕ ತಂತ್ರಜ್ಞಾನದ ನೆರವು ಬೇಕಿದೆ. ಅದನ್ನು ಒದಗಿಸಲಾಗುವುದು ಎಂದರು.</p>.<p>ರಾಷ್ಟ್ರದಲ್ಲಿಯೇ ಅತ್ಯುತ್ತಮ ಪೊಲೀಸ್ ಪಡೆ ಎನ್ನುವ ಹೆಗ್ಗಳಿಕೆಯನ್ನು ಕರ್ನಾಟಕ ರಾಜ್ಯ ಪೊಲೀಸ್ ಪಡೆ ಪಡೆದಿದೆ. ಅತಿ ಸೂಕ್ಷ್ಮ ಪ್ರಕರಣಗಳನ್ನು ವಿಚಾರಣೆಗೆ ಗುರಿಪಡಿಸಿದ ನಮ್ಮ ಪೊಲೀಸ್ ಪಡೆಯ ಕ್ಷಮತೆ ಅದ್ವಿತೀಯವಾದುದು ಎಂದು ಶ್ಲಾಘಿಸಿದರು.</p>.<p>ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ಅಪರಾಧಗಳನ್ನು ತಡೆಗಟ್ಟಲು ಹಾಗೂ ಅಪರಾಧಿಗಳನ್ನು ಪತ್ತೆ ಮಾಡಲು ಹಬ್ಬ–ಹರಿದಿನಗಳೆನ್ನದೇ ಸದಾಕಾಲ ದಕ್ಷತೆಯಿಂದ ದಣಿವಿಲ್ಲದೇ ಪೊಲೀಸರು ಶ್ರಮಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.</p>.<p>ಪೊಲೀಸ್ ಪದಕ ಪ್ರದಾನ ಮಾಡಿದ ರಾಜ್ಯಪಾಲ ವಜುಬಾಯಿ ವಾಲಾ ಮಾತನಾಡಿ, ಸಜ್ಜನರಿಗೆ ರಕ್ಷಣೆ ನೀಡಿ, ದುರ್ಜನ ಮನಸ್ಥಿತಿಯನ್ನು ಶಿಕ್ಷಿಸಬೇಕು. ಬದುಕಿರುವಷ್ಟು ದಿನ ಶೌರ್ಯ, ಪೌರುಷ ಮತ್ತು ಗರ್ವದಿಂದ ಬದುಕಬೇಕುಎಂದು ಹೇಳಿದರು.</p>.<p>ರಾಜ್ಯದಲ್ಲಿ ಶಾಂತಿ ಕಾಪಾಡುವುದು ಪೊಲೀಸರ ಜವಾಬ್ದಾರಿಯಾಗಿದ್ದು, ಅವರು ತಮ್ಮ ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ನಿವರ್ಹಿಸುತ್ತಿದ್ದಾರೆ. ಒಬ್ಬ ಸಾಮಾನ್ಯ ವ್ಯಕ್ತಿಯು ಪೊಲೀಸರನ್ನು ನೋಡಿದಾಗ ಸುರಕ್ಷಿತ ಭಾವನೆಯು ಜನರಲ್ಲಿ ಮೂಡಬೇಕು ಎಂದು ತಿಳಿಸಿದರು.</p>.<p>ಪದಕ ಪಡೆದ ಅಧಿಕಾರಿಗಳು ತಮ್ಮ ಸಹೋದ್ಯೋಗಿಗಳು ರಾಜ್ಯದ ಜನರ ಸುರಕ್ಷತೆಯನ್ನು ಕಾಪಾಡಲು ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ವಜುಬಾಯಿ ವಾಲಾ ಸಲಹೆ ನೀಡಿದರು.</p>.<p>ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವ ದಿನಾಚರಣೆಯ (2018–2019 ನೇ ಸಾಲಿನ) ಸಂದರ್ಭದಲ್ಲಿ ವಿಶೇಷ ಸೇವೆ ಸಲ್ಲಿಸಿದ 4 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಪದಕ ಮತ್ತು ಪ್ರಶಂಸನೀಯ ಸೇವೆ ಸಲ್ಲಿಸಿದ 74 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪೊಲೀಸ್ ಪದಕ ಪ್ರದಾನ ಮಾಡಿ ಗೌರವಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗೃಹ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್, ಡಿಜಿಪಿ ಪ್ರವೀಣ್ ಸೂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>