ಗುರುವಾರ ಬೆಳಿಗ್ಗೆ ಕಾಚರಕನಹಳ್ಳಿಯಲ್ಲಿ ಮಾತನಾಡಿದ್ದ ಅವರು, ಇದೇ 25ಕ್ಕೆ ವರಿಷ್ಠರ ಸಂದೇಶ ಬರಲಿದ್ದು, ಆ ಪ್ರಕಾರವೇ ನಡೆದು ಕೊಳ್ಳುತ್ತೇನೆ ಎಂದು ತಿಳಿಸಿದ್ದರು. ಸಂಜೆ ಅವರು ಸಚಿವ ಸಂಪುಟ ಸಭೆಗೆ ಹಾಜರಾಗುವುದಕ್ಕೆ ಮುನ್ನ ಸುದ್ದಿಗಾರರ ಜತೆ ಮಾತನಾಡಿ, ವರಿಷ್ಠರು ಬೇಡ ಎಂದ ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದರು.