<p><strong>ಬೆಂಗಳೂರು:</strong> ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಧ್ವಜಾರೋಹಣ ನಡೆಸಲು ಸಾಧ್ಯವಾಗುವುದಿಲ್ಲವೇ? ಅವರು ಕೋವಿಡ್ನಿಂದ ಗುಣಮುಖರಾದರೂ ಮನೆಯಲ್ಲಿ 14 ದಿನಗಳು ಪ್ರತ್ಯೇಕವಾಸ ಅನುಭವಿಸಬೇಕಾಗುತ್ತದೆಯೇ?</p>.<p>ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಸೋಂಕಿತರು ಗುಣಮುಖರಾದ ಬಳಿಕವೂ 14 ದಿನ ಮನೆಯಲ್ಲೇ ಪ್ರತ್ಯೇಕ ವಾಸ ಅನುಭವಿಸುವುದು ಕಡ್ಡಾಯ. ಹಾಗಾಗಿ ಈ ವಿಚಾರ ಜಿಜ್ಞಾಸೆಗೆ ಕಾರಣವಾಗಿದೆ.</p>.<p>ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಗುರುವಾರ ಉತ್ತರಿಸಿದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ‘ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ’ ಎಂದರು.</p>.<p>‘ಸರ್ಕಾರದ ಆಡಳಿತದ ಭಾಗವಾಗಿರುವ ಯಾರಿಗಾದರೂ ಕೋವಿಡ್ ಸೋಂಕು ದೃಢಪಟ್ಟರೆ, ರೋಗ ವಾಸಿಯಾದ ತಕ್ಷಣವೇ ಅವರು ಕರ್ತವ್ಯಕ್ಕೆ ಮರಳಬಹುದು. ಅವರಿಗೆ 14 ದಿನಗಳ ಪ್ರತ್ಯೇಕ ವಾಸ ಕಡ್ಡಾಯವಲ್ಲ. ಆಡಳಿತ ಯಂತ್ರ ಹಳಿ ತಪ್ಪಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ತಿಂಗಳ ಹಿಂದೆಯೇ ಈ ಕುರಿತ ಮಾರ್ಗಸೂಚಿ ಹೊರಡಿಸಿದೆ. ಅನೇಕ ಅಧಿಕಾರಿಗಳು ಕೋವಿಡ್ ಗುಣಮುಖವಾದ ತಕ್ಷಣವೇ ಕರ್ತವ್ಯಕ್ಕೆ ಮರಳಿದ್ದಾರೆ’ ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಧ್ವಜಾರೋಹಣ ನಡೆಸಲು ಸಾಧ್ಯವಾಗುವುದಿಲ್ಲವೇ? ಅವರು ಕೋವಿಡ್ನಿಂದ ಗುಣಮುಖರಾದರೂ ಮನೆಯಲ್ಲಿ 14 ದಿನಗಳು ಪ್ರತ್ಯೇಕವಾಸ ಅನುಭವಿಸಬೇಕಾಗುತ್ತದೆಯೇ?</p>.<p>ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಸೋಂಕಿತರು ಗುಣಮುಖರಾದ ಬಳಿಕವೂ 14 ದಿನ ಮನೆಯಲ್ಲೇ ಪ್ರತ್ಯೇಕ ವಾಸ ಅನುಭವಿಸುವುದು ಕಡ್ಡಾಯ. ಹಾಗಾಗಿ ಈ ವಿಚಾರ ಜಿಜ್ಞಾಸೆಗೆ ಕಾರಣವಾಗಿದೆ.</p>.<p>ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಗುರುವಾರ ಉತ್ತರಿಸಿದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ‘ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ’ ಎಂದರು.</p>.<p>‘ಸರ್ಕಾರದ ಆಡಳಿತದ ಭಾಗವಾಗಿರುವ ಯಾರಿಗಾದರೂ ಕೋವಿಡ್ ಸೋಂಕು ದೃಢಪಟ್ಟರೆ, ರೋಗ ವಾಸಿಯಾದ ತಕ್ಷಣವೇ ಅವರು ಕರ್ತವ್ಯಕ್ಕೆ ಮರಳಬಹುದು. ಅವರಿಗೆ 14 ದಿನಗಳ ಪ್ರತ್ಯೇಕ ವಾಸ ಕಡ್ಡಾಯವಲ್ಲ. ಆಡಳಿತ ಯಂತ್ರ ಹಳಿ ತಪ್ಪಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ತಿಂಗಳ ಹಿಂದೆಯೇ ಈ ಕುರಿತ ಮಾರ್ಗಸೂಚಿ ಹೊರಡಿಸಿದೆ. ಅನೇಕ ಅಧಿಕಾರಿಗಳು ಕೋವಿಡ್ ಗುಣಮುಖವಾದ ತಕ್ಷಣವೇ ಕರ್ತವ್ಯಕ್ಕೆ ಮರಳಿದ್ದಾರೆ’ ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>